ಚಾಮರಾಜನಗರ:‘ಅಡಗೂರು ಎಚ್.ವಿಶ್ವನಾಥ್ ಅವರು ಸಚಿವ ಸಂಪುಟಕ್ಕೆ ಸೇರುತ್ತಾರೋ ಇಲ್ಲವೋ ಎಂಬ ಭವಿಷ್ಯ ಹೇಳುವುದಕ್ಕೆ ಆಗುವುದಿಲ್ಲ. ಇದು ಮುಖ್ಯವಾದ ಪ್ರಶ್ನೆಯೂ ಅಲ್ಲ. ಅವರಿಗೆ ಸಚಿವ ಸ್ಥಾನ ಸಿಗದೇ ಹೋದರೆ ಜಗತ್ತು ಮುಳುಗಿ ಹೋಗುತ್ತದೆಯೇ? ರಾಜ್ಯದ ಮುಂದೆ ಸಂಕಷ್ಟ ಇದೆ. ಅದರ ಬಗ್ಗೆ ಯೋಚನೆ ಮಾಡಬೇಕು. ಎಲ್ಲರ ಸಹಕಾರ ಪಡೆದು ಅದನ್ನು ನಿಭಾಯಿಸಬೇಕಾಗಿದೆ’ ಎಂದು ಸಂಸದ ಶ್ರೀನಿವಾಸ ಪ್ರಸಾದ್ ಹೇಳಿದರು.