<p><strong>ಬೆಂಗಳೂರು:</strong> ಕಪ್ಪು ಶಿಲೀಂದ್ರ ಸೋಂಕಿತರಿಗೆ ಚಿಕಿತ್ಸೆ ನೀಡಲು ರಾಜ್ಯದಲ್ಲಿ ಲಭ್ಯ ಇರುವ ಹಾಸಿಗೆಗಳ ಸಂಖ್ಯೆಗೆ ಸಂಬಂಧಿಸಿದಂತೆ ಅಂಕಿ–ಅಂಶ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಸದ್ಯ ರಾಜ್ಯದಲ್ಲಿ 2,282 ಕಪ್ಪು ಶಿಲೀಂದ್ರ ಪ್ರರಕಣಗಳು ವರದಿಯಾಗಿವೆ. 1,947 ರೋಗಿಗಳು ಚಿಕಿತ್ಸೆಯಲ್ಲಿದ್ದು, 157 ಜನ ಮೃತಪಟ್ಟಿದ್ದಾರೆ. 102 ಮಂದಿ ಗುಣಮುಖರಾಗಿದ್ದಾರೆ ಎಂದು ಸರ್ಕಾರ ವಿವರಿಸಿತು.</p>.<p>‘ಐಸಿಎಂಆರ್ ಹೊರಡಿಸಿರುವ ಹೊಸ ಮಾರ್ಗಸೂಚಿಗಳ ಪ್ರಕಾರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಅಗತ್ಯ ಔಷಧಗಳನ್ನ ಕೇಂದ್ರ ಸರ್ಕಾರ ಪೂರೈಸಬೇಕು’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಶೇಷ ವಿಭಾಗೀಯ ಪೀಠ ನಿರ್ದೇಶನ ನೀಡಿತು.</p>.<p>‘22,050 ಡೋಸ್ ಚುಚ್ಚುಮದ್ದನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಹಂಚಿಕೆ ಮಾಡಿದೆ. ಅದರಲ್ಲಿ 19,950 ಚುಚ್ಚುಮದ್ದನ್ನು ಪಡೆಯಲಾಗಿದೆ. ಪ್ರತಿ ರೋಗಿಗೆ 30 ಡೋಸ್ ಚುಚ್ಚುಮದ್ದು ಅಗತ್ಯವಿದೆ’ ಎಂದು ಸರ್ಕಾರ ವಿವರಿಸಿತು.</p>.<p class="Subhead"><strong>ಕೋವಿಡ್ ಕೇಂದ್ರ ಮುಚ್ಚಬಾರದು: </strong>ಕೋವಿಡ್ ಮೂರನೇ ಅಲೆಯ ಸಂಭವ ಇರುವ ಕಾರಣ ಬಿಬಿಎಂಪಿ ಕೋವಿಡ್ ಕೇಂದ್ರಗಳನ್ನು ಮುಚ್ಚಬಾರದು ಎಂದು ಪೀಠ ಸೂಚನೆ ನೀಡಿತು.</p>.<p>‘ಮೊದಲನೇ ಅಲೆಯ ಬಳಿಕ ಕೆಲ ಕೋವಿಡ್ ಕೇಂದ್ರಗಳನ್ನು ಮುಚ್ಚಿ ಎರಡನೇ ಅಲೆಯಲ್ಲಿ ಮತ್ತೆ ತೆರೆಯಬೇಕಾಯಿತು. ಈ ಬಾರಿ ಹಾಗೆ ಮಾಡದೆ ಕೋವಿಡ್ ಕೇಂದ್ರಗಳನ್ನು ಕಾಯ್ದಿರಿಸಿಕೊಳ್ಳಬೇಕು’ ಎಂದು ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಪ್ಪು ಶಿಲೀಂದ್ರ ಸೋಂಕಿತರಿಗೆ ಚಿಕಿತ್ಸೆ ನೀಡಲು ರಾಜ್ಯದಲ್ಲಿ ಲಭ್ಯ ಇರುವ ಹಾಸಿಗೆಗಳ ಸಂಖ್ಯೆಗೆ ಸಂಬಂಧಿಸಿದಂತೆ ಅಂಕಿ–ಅಂಶ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಸದ್ಯ ರಾಜ್ಯದಲ್ಲಿ 2,282 ಕಪ್ಪು ಶಿಲೀಂದ್ರ ಪ್ರರಕಣಗಳು ವರದಿಯಾಗಿವೆ. 1,947 ರೋಗಿಗಳು ಚಿಕಿತ್ಸೆಯಲ್ಲಿದ್ದು, 157 ಜನ ಮೃತಪಟ್ಟಿದ್ದಾರೆ. 102 ಮಂದಿ ಗುಣಮುಖರಾಗಿದ್ದಾರೆ ಎಂದು ಸರ್ಕಾರ ವಿವರಿಸಿತು.</p>.<p>‘ಐಸಿಎಂಆರ್ ಹೊರಡಿಸಿರುವ ಹೊಸ ಮಾರ್ಗಸೂಚಿಗಳ ಪ್ರಕಾರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಅಗತ್ಯ ಔಷಧಗಳನ್ನ ಕೇಂದ್ರ ಸರ್ಕಾರ ಪೂರೈಸಬೇಕು’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಶೇಷ ವಿಭಾಗೀಯ ಪೀಠ ನಿರ್ದೇಶನ ನೀಡಿತು.</p>.<p>‘22,050 ಡೋಸ್ ಚುಚ್ಚುಮದ್ದನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಹಂಚಿಕೆ ಮಾಡಿದೆ. ಅದರಲ್ಲಿ 19,950 ಚುಚ್ಚುಮದ್ದನ್ನು ಪಡೆಯಲಾಗಿದೆ. ಪ್ರತಿ ರೋಗಿಗೆ 30 ಡೋಸ್ ಚುಚ್ಚುಮದ್ದು ಅಗತ್ಯವಿದೆ’ ಎಂದು ಸರ್ಕಾರ ವಿವರಿಸಿತು.</p>.<p class="Subhead"><strong>ಕೋವಿಡ್ ಕೇಂದ್ರ ಮುಚ್ಚಬಾರದು: </strong>ಕೋವಿಡ್ ಮೂರನೇ ಅಲೆಯ ಸಂಭವ ಇರುವ ಕಾರಣ ಬಿಬಿಎಂಪಿ ಕೋವಿಡ್ ಕೇಂದ್ರಗಳನ್ನು ಮುಚ್ಚಬಾರದು ಎಂದು ಪೀಠ ಸೂಚನೆ ನೀಡಿತು.</p>.<p>‘ಮೊದಲನೇ ಅಲೆಯ ಬಳಿಕ ಕೆಲ ಕೋವಿಡ್ ಕೇಂದ್ರಗಳನ್ನು ಮುಚ್ಚಿ ಎರಡನೇ ಅಲೆಯಲ್ಲಿ ಮತ್ತೆ ತೆರೆಯಬೇಕಾಯಿತು. ಈ ಬಾರಿ ಹಾಗೆ ಮಾಡದೆ ಕೋವಿಡ್ ಕೇಂದ್ರಗಳನ್ನು ಕಾಯ್ದಿರಿಸಿಕೊಳ್ಳಬೇಕು’ ಎಂದು ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>