<p><strong>ಬೆಂಗಳೂರು:</strong> ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಸೋಂಕಿನ ಚಿಕಿತ್ಸೆಯಲ್ಲಿ ಬಳಸುವ ಆ್ಯಂಫೋಟೆರಿಸಿನ್-ಬಿ ಔಷಧ ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ಕೇಂದ್ರ ಸರ್ಕಾರವು 1,930 ಆ್ಯಂಫೋಟೆರಿಸಿನ್-ಬಿ ವಯಲ್ಸ್ಗಳನ್ನು ಕರ್ನಾಟಕಕ್ಕೆ ಹಂಚಿಕೆ ಮಾಡಿದೆ. ಈ ಕುರಿತು ಔಷಧ ಇಲಾಖೆಯನ್ನೂ ಹೊಂದಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಟ್ವೀಟ್ ಮಾಡಿದ್ದರು.</p>.<p><strong>ಓದಿ:</strong><a href="https://www.prajavani.net/karnataka-news/state-got-more-number-of-medicine-and-injection-for-black-fungus-834863.html" target="_blank">ಕಪ್ಪು ಶಿಲೀಂಧ್ರ: ರಾಜ್ಯಕ್ಕೆ ಮತ್ತೆ 1,930 ವಯಲ್ಸ್ ಹಂಚಿಕೆ</a></p>.<p>ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ರಾಜ್ಯದಲ್ಲಿರುವ ಸೋಂಕಿತರ ಸಂಖ್ಯೆಗೆ ಸಂಬಂಧಿಸಿದ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ, ‘ಸದಾನಂದ ಗೌಡ ಅವರೇ, ಆ್ಯಂಫೋಟೆರಿಸಿನ್-ಬಿ ಔಷಧವನ್ನು ರಾಜ್ಯಕ್ಕೆ 1930 ವಯಲ್ಸ್ ಹಂಚಿಕೆ ಮಾಡಿದ್ದೇವೆಂದು ಹೆಮ್ಮೆಯಿಂದ ಹೇಳಿದ್ದೀರಿ. ರಾಜ್ಯದಲ್ಲಿ 1319 ಸೋಂಕಿತರಿದ್ದಾರೆಂದು ವರದಿಗಳು ಹೇಳುತ್ತಿವೆ, ಒಬ್ಬ ಸೋಂಕಿತನ ಚಿಕಿತ್ಸೆಗೆ 50ರಿಂದ 90 ವಯಲ್ಸ್ ಬೇಕು. ನೀವು ಕೊಟ್ಟಿದ್ದು ಎಷ್ಟು ಜನರಿಗೆ ಸಾಲುತ್ತದೆಂದು ಅರಿವಿದೆಯೇ’ ಎಂದು ಪ್ರಶ್ನಿಸಿದೆ.</p>.<p>ಕಪ್ಪು ಶಿಲೀಂಧ್ರ ರೋಗದ ಚಿಕಿತ್ಸೆಗೆ ವಿವಿಧ ರಾಜ್ಯಗಳಿಗೆ ಹೆಚ್ಚುವರಿಯಾಗಿ ಒಟ್ಟು 30,100 ಆ್ಯಂಫೋಟೆರಿಸಿನ್-ಬಿ ವಯಲ್ಸ್ಗಳನ್ನು ಕೇಂದ್ರ ಸರ್ಕಾರ ಸೋಮವಾರ ಹಂಚಿಕೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ 1,930 ವಯಲ್ಸ್ ದೊರೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಸೋಂಕಿನ ಚಿಕಿತ್ಸೆಯಲ್ಲಿ ಬಳಸುವ ಆ್ಯಂಫೋಟೆರಿಸಿನ್-ಬಿ ಔಷಧ ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ಕೇಂದ್ರ ಸರ್ಕಾರವು 1,930 ಆ್ಯಂಫೋಟೆರಿಸಿನ್-ಬಿ ವಯಲ್ಸ್ಗಳನ್ನು ಕರ್ನಾಟಕಕ್ಕೆ ಹಂಚಿಕೆ ಮಾಡಿದೆ. ಈ ಕುರಿತು ಔಷಧ ಇಲಾಖೆಯನ್ನೂ ಹೊಂದಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಟ್ವೀಟ್ ಮಾಡಿದ್ದರು.</p>.<p><strong>ಓದಿ:</strong><a href="https://www.prajavani.net/karnataka-news/state-got-more-number-of-medicine-and-injection-for-black-fungus-834863.html" target="_blank">ಕಪ್ಪು ಶಿಲೀಂಧ್ರ: ರಾಜ್ಯಕ್ಕೆ ಮತ್ತೆ 1,930 ವಯಲ್ಸ್ ಹಂಚಿಕೆ</a></p>.<p>ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ರಾಜ್ಯದಲ್ಲಿರುವ ಸೋಂಕಿತರ ಸಂಖ್ಯೆಗೆ ಸಂಬಂಧಿಸಿದ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ, ‘ಸದಾನಂದ ಗೌಡ ಅವರೇ, ಆ್ಯಂಫೋಟೆರಿಸಿನ್-ಬಿ ಔಷಧವನ್ನು ರಾಜ್ಯಕ್ಕೆ 1930 ವಯಲ್ಸ್ ಹಂಚಿಕೆ ಮಾಡಿದ್ದೇವೆಂದು ಹೆಮ್ಮೆಯಿಂದ ಹೇಳಿದ್ದೀರಿ. ರಾಜ್ಯದಲ್ಲಿ 1319 ಸೋಂಕಿತರಿದ್ದಾರೆಂದು ವರದಿಗಳು ಹೇಳುತ್ತಿವೆ, ಒಬ್ಬ ಸೋಂಕಿತನ ಚಿಕಿತ್ಸೆಗೆ 50ರಿಂದ 90 ವಯಲ್ಸ್ ಬೇಕು. ನೀವು ಕೊಟ್ಟಿದ್ದು ಎಷ್ಟು ಜನರಿಗೆ ಸಾಲುತ್ತದೆಂದು ಅರಿವಿದೆಯೇ’ ಎಂದು ಪ್ರಶ್ನಿಸಿದೆ.</p>.<p>ಕಪ್ಪು ಶಿಲೀಂಧ್ರ ರೋಗದ ಚಿಕಿತ್ಸೆಗೆ ವಿವಿಧ ರಾಜ್ಯಗಳಿಗೆ ಹೆಚ್ಚುವರಿಯಾಗಿ ಒಟ್ಟು 30,100 ಆ್ಯಂಫೋಟೆರಿಸಿನ್-ಬಿ ವಯಲ್ಸ್ಗಳನ್ನು ಕೇಂದ್ರ ಸರ್ಕಾರ ಸೋಮವಾರ ಹಂಚಿಕೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ 1,930 ವಯಲ್ಸ್ ದೊರೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>