<p><strong>ಬೆಂಗಳೂರು:</strong> ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿರುವ ನಟ ಮುಖ್ಯಮಂತ್ರಿ ಚಂದ್ರು ಮಂಗಳವಾರ ಆಮ್ ಆದ್ಮಿ ಪಕ್ಷ (ಎಎಪಿ) ಸೇರಿದ್ದಾರೆ. ಈ ಕುರಿತು ಎಎಪಿಬೆಂಗಳೂರು ಘಟಕ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದೆ.</p>.<p>ಕರ್ನಾಟಕದ ‘ಮುಖ್ಯಮಂತ್ರಿ’ ಈಗ ಆಮ್ ಆದ್ಮಿ. ನಮ್ಮ ಕುಟುಂಬಕ್ಕೆ ಸ್ವಾಗತ ಮುಖ್ಯಮಂತ್ರಿಗಳೇ, ಎಂದು ಎಎಪಿ ಟ್ವೀಟ್ ಮಾಡಿದೆ. ಜತೆಗೆ ಚಂದ್ರು ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದ ಫೇಸ್ಬುಕ್ ನೇರ ಪ್ರಸಾರದ ಲಿಂಕ್ ಅನ್ನು ಹಂಚಿಕೊಂಡಿದೆ.</p>.<p><a href="https://www.prajavani.net/karnataka-news/actor-mukyamanthri-chandru-left-congress-940648.html" target="_blank">ಕಾಂಗ್ರೆಸ್ ತೊರೆದ ಚಿತ್ರನಟ 'ಮುಖ್ಯಮಂತ್ರಿʼ ಚಂದ್ರು</a></p>.<p>ಚಂದ್ರು ಅವರು ಮೇ 29ರಂದು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದ ಅವರು, ವೈಯಕ್ತಿಕ ಕಾರಣಗಳಿಂದ ಪಕ್ಷ ತ್ಯಜಿಸುತ್ತಿರುವುದಾಗಿ ಹೇಳಿದ್ದರು.</p>.<p>‘ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಸಂದರ್ಭದಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸಿಲ್ಲ. 2018ರಲ್ಲಿ ವಿಧಾನ ಪರಿಷತ್ಗೆ ನಾಮಕರಣ ಮಾಡಲು ಹೆಸರನ್ನು ಅಂತಿಮಗೊಳಿಸಿ, ಕೊನೆಯ ಕ್ಷಣದಲ್ಲಿ ಪ್ರಭಾವಿ ನಾಯಕರೊಬ್ಬರ ಹಸ್ತಕ್ಷೇಪದಿಂದ ಬದಲಾವಣೆ ಮಾಡಿದ್ದರು. ಈ ಎಲ್ಲವೂ ನನಗೆ ನೋವುಂಟು ಮಾಡಿದೆʼ ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿರುವ ನಟ ಮುಖ್ಯಮಂತ್ರಿ ಚಂದ್ರು ಮಂಗಳವಾರ ಆಮ್ ಆದ್ಮಿ ಪಕ್ಷ (ಎಎಪಿ) ಸೇರಿದ್ದಾರೆ. ಈ ಕುರಿತು ಎಎಪಿಬೆಂಗಳೂರು ಘಟಕ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದೆ.</p>.<p>ಕರ್ನಾಟಕದ ‘ಮುಖ್ಯಮಂತ್ರಿ’ ಈಗ ಆಮ್ ಆದ್ಮಿ. ನಮ್ಮ ಕುಟುಂಬಕ್ಕೆ ಸ್ವಾಗತ ಮುಖ್ಯಮಂತ್ರಿಗಳೇ, ಎಂದು ಎಎಪಿ ಟ್ವೀಟ್ ಮಾಡಿದೆ. ಜತೆಗೆ ಚಂದ್ರು ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದ ಫೇಸ್ಬುಕ್ ನೇರ ಪ್ರಸಾರದ ಲಿಂಕ್ ಅನ್ನು ಹಂಚಿಕೊಂಡಿದೆ.</p>.<p><a href="https://www.prajavani.net/karnataka-news/actor-mukyamanthri-chandru-left-congress-940648.html" target="_blank">ಕಾಂಗ್ರೆಸ್ ತೊರೆದ ಚಿತ್ರನಟ 'ಮುಖ್ಯಮಂತ್ರಿʼ ಚಂದ್ರು</a></p>.<p>ಚಂದ್ರು ಅವರು ಮೇ 29ರಂದು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದ ಅವರು, ವೈಯಕ್ತಿಕ ಕಾರಣಗಳಿಂದ ಪಕ್ಷ ತ್ಯಜಿಸುತ್ತಿರುವುದಾಗಿ ಹೇಳಿದ್ದರು.</p>.<p>‘ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಸಂದರ್ಭದಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸಿಲ್ಲ. 2018ರಲ್ಲಿ ವಿಧಾನ ಪರಿಷತ್ಗೆ ನಾಮಕರಣ ಮಾಡಲು ಹೆಸರನ್ನು ಅಂತಿಮಗೊಳಿಸಿ, ಕೊನೆಯ ಕ್ಷಣದಲ್ಲಿ ಪ್ರಭಾವಿ ನಾಯಕರೊಬ್ಬರ ಹಸ್ತಕ್ಷೇಪದಿಂದ ಬದಲಾವಣೆ ಮಾಡಿದ್ದರು. ಈ ಎಲ್ಲವೂ ನನಗೆ ನೋವುಂಟು ಮಾಡಿದೆʼ ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>