<p><strong>ಬೆಂಗಳೂರು</strong>: ‘ಎಲ್ಲಾ ಉದ್ಯಮ ಸಂಸ್ಥೆಗಳೂ ಕನ್ನಡ ಕಾಳಜಿ ಮೆರೆಯಬೇಕು. ಹಾಗಾದಾಗ ಮಾತ್ರ ಭಾಷೆಯ ಉಳಿವು ಹಾಗೂ ಬೆಳವಣಿಗೆಯ ಹಾದಿ ಸುಲಭವಾಗುತ್ತದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಅಭಿಪ್ರಾಯಪಟ್ಟರು.</p>.<p>ಮುಳಿಯ ಪ್ರತಿಷ್ಠಾನವು ಕರ್ನಾಟಕ ಲೇಖಕಿಯರ ಸಂಘದ ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಮನೆ–ಮನದಲ್ಲಿ ಕನ್ನಡ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಭಾಷೆಯು ಭಾಷಣದ ವಸ್ತುವಲ್ಲ. ಅದು ಸಂಸ್ಕೃತಿಯ ಪ್ರತಿಬಿಂಬ. ದೇಶದಲ್ಲಿ ಕನ್ನಡದಷ್ಟು ಶ್ರೀಮಂತ ಭಾಷೆ ಮತ್ತೊಂದಿಲ್ಲ. ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಮಾತಾಡ್ ಮಾತಾಡ್ ಕನ್ನಡ’ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕನ್ನಡಿಗರಲ್ಲಿರುವ ಭಾಷಾಭಿಮಾನಕ್ಕೆ ಇದು ಸಾಕ್ಷಿ’ ಎಂದರು.</p>.<p>ಸಾಹಿತಿ ಕಮಲಾ ಹಂಪನಾ, ‘ಹಿಂದಿ ರಾಷ್ಟ್ರಭಾಷೆಯಲ್ಲ. ಕನ್ನಡ ಸಹಿತ ದೇಶದ 23 ಭಾಷೆಗಳೂ ರಾಷ್ಟ್ರಭಾಷೆಗಳೇ. ಹೀಗಿದ್ದೂ ಹಿಂದಿ ಹೇರಿಕೆಗೆ ಮುಂದಾದರೆ ಅದಕ್ಕೆ ಪ್ರತಿರೋಧ ತೋರಲೇಬೇಕಾಗುತ್ತದೆ’ ಎಂದು ಹೇಳಿದರು.</p>.<p>ಶಿಕ್ಷಣ ತಜ್ಞೆ ಗೀತಾ ರಾಮಾನುಜಮ್, ಸಾಹಿತಿ ಭುವನೇಶ್ವರಿ ಹೆಗಡೆ, ಮುಳಿಯ ಆಭರಣ ಸಂಸ್ಥೆಯ ಆಡಳಿತ ನಿರ್ದೇಶಕ ಕೇಶವ ಪ್ರಸಾದ್ ಮುಳಿಯ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ್, ಸಾಹಿತಿ ನಾ.ದಾಮೋದರ ಶೆಟ್ಟಿ ಹಾಗೂ ನೀರಜ್ ಪಾಟೀಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಎಲ್ಲಾ ಉದ್ಯಮ ಸಂಸ್ಥೆಗಳೂ ಕನ್ನಡ ಕಾಳಜಿ ಮೆರೆಯಬೇಕು. ಹಾಗಾದಾಗ ಮಾತ್ರ ಭಾಷೆಯ ಉಳಿವು ಹಾಗೂ ಬೆಳವಣಿಗೆಯ ಹಾದಿ ಸುಲಭವಾಗುತ್ತದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಅಭಿಪ್ರಾಯಪಟ್ಟರು.</p>.<p>ಮುಳಿಯ ಪ್ರತಿಷ್ಠಾನವು ಕರ್ನಾಟಕ ಲೇಖಕಿಯರ ಸಂಘದ ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಮನೆ–ಮನದಲ್ಲಿ ಕನ್ನಡ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಭಾಷೆಯು ಭಾಷಣದ ವಸ್ತುವಲ್ಲ. ಅದು ಸಂಸ್ಕೃತಿಯ ಪ್ರತಿಬಿಂಬ. ದೇಶದಲ್ಲಿ ಕನ್ನಡದಷ್ಟು ಶ್ರೀಮಂತ ಭಾಷೆ ಮತ್ತೊಂದಿಲ್ಲ. ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಮಾತಾಡ್ ಮಾತಾಡ್ ಕನ್ನಡ’ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕನ್ನಡಿಗರಲ್ಲಿರುವ ಭಾಷಾಭಿಮಾನಕ್ಕೆ ಇದು ಸಾಕ್ಷಿ’ ಎಂದರು.</p>.<p>ಸಾಹಿತಿ ಕಮಲಾ ಹಂಪನಾ, ‘ಹಿಂದಿ ರಾಷ್ಟ್ರಭಾಷೆಯಲ್ಲ. ಕನ್ನಡ ಸಹಿತ ದೇಶದ 23 ಭಾಷೆಗಳೂ ರಾಷ್ಟ್ರಭಾಷೆಗಳೇ. ಹೀಗಿದ್ದೂ ಹಿಂದಿ ಹೇರಿಕೆಗೆ ಮುಂದಾದರೆ ಅದಕ್ಕೆ ಪ್ರತಿರೋಧ ತೋರಲೇಬೇಕಾಗುತ್ತದೆ’ ಎಂದು ಹೇಳಿದರು.</p>.<p>ಶಿಕ್ಷಣ ತಜ್ಞೆ ಗೀತಾ ರಾಮಾನುಜಮ್, ಸಾಹಿತಿ ಭುವನೇಶ್ವರಿ ಹೆಗಡೆ, ಮುಳಿಯ ಆಭರಣ ಸಂಸ್ಥೆಯ ಆಡಳಿತ ನಿರ್ದೇಶಕ ಕೇಶವ ಪ್ರಸಾದ್ ಮುಳಿಯ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ್, ಸಾಹಿತಿ ನಾ.ದಾಮೋದರ ಶೆಟ್ಟಿ ಹಾಗೂ ನೀರಜ್ ಪಾಟೀಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>