ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುರಸಭೆ, ನಗರಸಭೆ ಆಸ್ತಿ ತೆರಿಗೆ ಹೆಚ್ಚಳಕ್ಕೆ ಒಪ್ಪಿಗೆ

ಎರಡು ಮಸೂದೆಗಳಿಗೆ ವಿಧಾನಸಭೆ ಒಪ್ಪಿಗೆ
Last Updated 4 ಫೆಬ್ರುವರಿ 2021, 19:32 IST
ಅಕ್ಷರ ಗಾತ್ರ

ಬೆಂಗಳೂರು: ಪುರಸಭೆ ಮತ್ತು ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಿಸುವ ಉದ್ದೇಶದ ಎರಡು ಮಸೂದೆಗಳಿಗೆ ವಿಧಾನಸಭೆ ಗುರುವಾರ ಒಪ್ಪಿಗೆ ನೀಡಿತು.

ಕರ್ನಾಟಕ ಪೌರಸಭೆಗಳ (ಎರಡನೇ ತಿದ್ದುಪಡಿ) ಮಸೂದೆ– 2021 ಮತ್ತು ಕರ್ನಾಟಕ ನಗರಪಾಲಿಕೆಗಳ(ತಿದ್ದುಪಡಿ) ಮಸೂದೆ –2021 ಇವುಗಳಿಗೆ ಈಗಾಗಲೇ ಸುಗ್ರೀವಾಜ್ಞೆ ಹೊರಡಿಸಲಾಗಿದ್ದು, ಇವುಗಳ ಮಸೂದೆಗೆ ಸದನದ ಒಪ್ಪಿಗೆ ಪಡೆಯಲಾಯಿತು. ಕಾಂಗ್ರೆಸ್‌ ಸದಸ್ಯರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಮಸೂದೆಗಳ ಕುರಿತು ಸಂಬಂಧ ಪಟ್ಟ ಸಚಿವರ ಪರವಾಗಿ ವಿವರ ನೀಡಿದ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌, ಕೇಂದ್ರ ಸರ್ಕಾರನಿವ್ವಳ ರಾಜ್ಯ ದೇಶೀಯ ಉತ್ಪನ್ನದ (ಜಿಎಸ್‌ಡಿಪಿ) ಆಧಾರದಲ್ಲಿ ರಾಜ್ಯಗಳಿಗೆ ಹೆಚ್ಚುವರಿ ಸಾಲ ಪಡೆಯಲು ಅನುಮತಿ ನೀಡಿದ್ದು, ಇದಕ್ಕಾಗಿ ಆಸ್ತಿ ತೆರಿಗೆ ಪರಿಷ್ಕರಿಸಲು ಕರಾರು ವಿಧಿಸಿತ್ತು. ಆ ಕಾರಣಕ್ಕೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಲಾಯಿತು ಎಂದರು.

ಪುರಸಭೆಗಳ ಸಬಲೀಕರಣ ಉದ್ದೇಶಕ್ಕಾಗಿ ಸ್ವತ್ತು ತೆರಿಗೆ ಪರಿಷ್ಕರಿಸು ವುದು ಅಗತ್ಯ. 2020–21 ನೇ ಸಾಲಿಗೆ ನಿವ್ವಳ ರಾಜ್ಯ ದೇಶೀಯ ಉತ್ಪನ್ನದ (ಜಿಎಸ್‌ಡಿಪಿ) ಶೇ 0.25 ಹೆಚ್ಚುವರಿ ಸಾಲ ಪಡೆಯುವ ಮಿತಿಗೆ ಈ ತಿದ್ದುಪಡಿಯಿಂದ ರಾಜ್ಯ ಸರ್ಕಾರ ಅರ್ಹವಾಗಲಿದೆ ಎಂದೂ ತಿಳಿಸಿದರು.

ಕರ್ನಾಟಕ ಪೌರಸಭೆಗಳ ಅಧಿ ನಿಯಮ 1964 ಅನ್ವಯ ಆಸ್ತಿ ತೆರಿಗೆಯನ್ನು ಶೇ 3ರಿಂದ 5ರಷ್ಟು ಪರಿ ಷ್ಕರಿಸಲು ಅವಕಾಶ ಕಲ್ಪಿಸಲಾಗಿದೆ. ಈಗ ಚಾಲ್ತಿಯಲ್ಲಿರುವ ಮಾರುಕಟ್ಟೆ ಮಾರ್ಗ ಸೂಚಿ ಮೌಲ್ಯಗಳಿಗೆ ಸ್ವತ್ತು ತೆರಿಗೆಯ ಮೂಲವನ್ನು ಜೋಡಿಸಲಾಗುವುದು. ಇದರಿಂದ ಸ್ಥಳೀಯ ಸಂಸ್ಥೆಗಳಲ್ಲಿ ರಾಜಸ್ವ ವನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ ಎಂದು ಸಚಿವ ಎಂಟಿಬಿ ನಾಗರಾಜ್‌ ತಿಳಿಸಿದರು.

ತೆರಿಗೆ ಪರಿಷ್ಕರಣೆ ಈ ವರ್ಷ ಜಾರಿ ಆಗುವುದಿಲ್ಲ. ಮುಂದಿನ ವರ್ಷದಿಂದ ಜಾರಿ ಆಗಲಿದೆ. ಸ್ಥಳೀಯ ಸಂಸ್ಥೆಗಳನ್ನು ಮೇಲ್ದರ್ಜೆಗೇರಿಸುವುದು ಅಗತ್ಯವಾಗಿ ದೆ. ಅಭಿವೃದ್ಧಿಗೆ ಸಂಪನ್ಮೂಲ ಸಂಗ್ರಹ ಅಗತ್ಯವಾಗಿದೆ. ಇದಕ್ಕಾಗಿ ತೆರಿಗೆ ಹೆಚ್ಚಿಸುವುದೂ ಅನಿವಾರ್ಯ ಎಂದು ಅವರು ಪ್ರತಿಪಾದಿಸಿದರು.

ಕೋವಿಡ್‌ ಸಂದರ್ಭದಲ್ಲಿ ಆಸ್ತಿ ತೆರಿಗೆ ಹೆಚ್ಚಿಸುವ ಅಗತ್ಯ ಏನಿದೆ. ಜನರ ಬಳಿ ಆದಾಯವಿಲ್ಲ. ತರಾತುರಿಯಲ್ಲಿ ಸುಗ್ರೀವಾಜ್ಞೆ ತರುವ ಅಗತ್ಯ ಏನಿತ್ತು ಎಂದು ಕಾಂಗ್ರೆಸ್‌ನ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದರು.

ಕಾಂಗ್ರೆಸ್‌ನ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ನಗರ ಪಾಲಿಕೆ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ತೆರಿಗೆ ಪ್ರಮಾಣ ಎಷ್ಟು ಹೆಚ್ಚಿಸಲಾಗುತ್ತದೆ ಎಂಬ ಮಾಹಿತಿ ನೀಡಬೇಕು ಎಂದರು.

ಹುಣಸೂರು ಶಾಸಕ ಎಚ್‌.ಪಿ. ಮಂಜುನಾಥ್ ಮಾತನಾಡಿ, ಸ್ಥಳೀಯ ಮಟ್ಟದಲ್ಲಿ ಶೇ 30 ರಷ್ಟು ಆಸ್ತಿ ತೆರಿಗೆ ಸಂಗ್ರಹವಾಗುತ್ತಿಲ್ಲ. ಈ ಪ್ರಮಾಣವನ್ನು ಶೇ 70 ರಷ್ಟು ಹೆಚ್ಚಿಸಲು ಕ್ರಮ ತೆಗೆದು ಕೊಂಡರೆ ಸಾಕು. ಆಗ ಆದಾಯ ಹೆಚ್ಚು ತ್ತದೆ. ತೆರಿಗೆ ಪರಿಷ್ಕರಿಸುವ ಅಗತ್ಯವಿಲ್ಲ ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT