<p><strong>ಬೆಂಗಳೂರು</strong>: ‘ಎಂ–ಸಿಸಿಟಿಎನ್ಎಸ್’ ಎಂಬ ಮೊಬೈಲ್ ಆ್ಯಪ್ ನೆರವಿನಿಂದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ರಮೇಶ್ ಎಂಬಾತನನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.</p>.<p>‘2005ರ ಆಗಸ್ಟ್ 29ರಂದು ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದ ಬಾಲಾಜಿ ನಗರದಲ್ಲಿ ಮನೆಯೊಂದಕ್ಕೆ ಬಣ್ಣ ಬಳಿಯಲು 12 ಮಂದಿ ಬಂದಿದ್ದರು. ಅವರೊಂದಿಗೆ ರಮೇಶ್ ಸಹ ಇದ್ದ. ಮನೆಯ ಮಾಲೀಕರೊಂದಿಗೆ ನಡೆದ ಗಲಾಟೆಯಲ್ಲಿ ಮಾಲೀಕರನ್ನೇ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಎಲ್ಲರನ್ನೂ ಬಂಧಿಸಲಾಗಿತ್ತು. 2010ರಲ್ಲಿ ಜಾಮೀನನ ಮೇಲೆ ಬಿಡುಗಡೆಯಾಗಿದ್ದ ರಮೇಶ್ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ಆರೋಪಿ ವಿರುದ್ಧ ವಾರೆಂಟ್ ಹೊರಡಿಸಿತ್ತು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಎಂ–ಸಿಸಿಟಿಎನ್ಎಸ್’ ಮೊಬೈಲ್ ಆ್ಯಪ್ ಮೂಲಕ ಬೆರಳು ಮುದ್ರೆ ಪರಿಶೀಲನೆಗೆ ಪುಟ್ಟದಾದ ಬೆರಳು ಮುದ್ರೆ ಪರಿಕರವನ್ನು ಎಲ್ಲ ಪೊಲೀಸ್ ಠಾಣೆಗಳಿಗೂ ನೀಡಲಾಗಿತ್ತು. ಈ ಪರಿಕರ ಬಳಸಿಕೊಂಡು ಮೊಬೈಲ್ ಅಪ್ಲಿಕೇಶನ್ ಮೂಲಕ ಅನುಮಾನಾಸ್ಪದ ವ್ಯಕ್ತಿಗಳ ಬೆರಳು ಮುದ್ರೆ ಪರಿಶೀಲಿಸಿದರೆ ಆ ವ್ಯಕ್ತಿ ಹಿಂದೆ ಯಾವುದಾದರೂ ಪ್ರಕರಣದಲ್ಲಿ ಭಾಗಿಯಾಗಿದ್ದರೆ ಅದರ ಮಾಹಿತಿ ತಿಳಿಯಲಿದೆ. ಇದೇ ತಂತ್ರಜ್ಞಾನ ಬಳಸಿಕೊಂಡು 12 ವರ್ಷಗಳ ಬಳಿಕ ಆರೋಪಿ ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಯಶವಂತಪುರ ಪೊಲೀಸ್ ಠಾಣೆಯ ಬಿಕೆ ನಗರದ 1ನೇ ಮುಖ್ಯರಸ್ತೆಯಲ್ಲಿ ರಮೇಶ್ ಅನುಮಾನಾಸ್ಪದವಾಗಿ ಈಚೆಗೆ ಓಡಾಟ ನಡೆಸುತ್ತಿದ್ದ. ಆತನನ್ನು ವಶಕ್ಕೆ ಪಡೆದು ಆ್ಯಪ್ ಮೂಲಕ ಬೆರಳು ಮುದ್ರೆ ಪರಿಶೀಲಿಸಿದಾಗ ಆರೋಪಿಯ ಮಾಹಿತಿ ಪೊಲೀಸರ ದತ್ತಾಂಶದಲ್ಲಿ ಇರುವುದು ದೃಢಪಟ್ಟಿತ್ತು’ ಎಂದು ಮೂಲಗಳು ತಿಳಿಸಿವೆ.</p>.<p><strong>₹ 1.30 ಕೋಟಿಯ ವಸ್ತು ಜಪ್ತಿ</strong><br />ಬೆಂಗಳೂರು: ಒಂದು ತಿಂಗಳ ಅವಧಿಯಲ್ಲಿ ದಕ್ಷಿಣ ವಿಭಾಗದ ಪೊಲೀಸರು ₹ 1.30 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. 161 ಆರೋಪಿಗಳನ್ನು ಬಂಧಿಸಿ, 176 ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ.</p>.<p>2 ಕೆ.ಜಿ. 676 ಗ್ರಾಂ ಚಿನ್ನಾಭರಣ, 134 ಬೈಕ್, 141 ಕೆ.ಜಿ ಗಾಂಜಾ, 1 ಕೆ.ಜಿ. ಎಂಡಿಎಂಎ, ₹ 3.83 ಲಕ್ಷ ಮೌಲ್ಯದ ವಿವಿಧ ಕಂಪನಿಯ 29 ಮೊಬೈಲ್ ವಶಕ್ಕೆ ಪಡೆದಿದ್ದಾರೆ.</p>.<p>ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದವರನ್ನು ಬಂಧಿಸಿ, ₹ 28 ಲಕ್ಷ ಜಪ್ತಿ ಮಾಡಲಾಗಿದೆ ಎಂದು ಡಿಸಿಪಿ ಪಿ.ಕೃಷ್ಣಕಾಂತ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಎಂ–ಸಿಸಿಟಿಎನ್ಎಸ್’ ಎಂಬ ಮೊಬೈಲ್ ಆ್ಯಪ್ ನೆರವಿನಿಂದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ರಮೇಶ್ ಎಂಬಾತನನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.</p>.<p>‘2005ರ ಆಗಸ್ಟ್ 29ರಂದು ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದ ಬಾಲಾಜಿ ನಗರದಲ್ಲಿ ಮನೆಯೊಂದಕ್ಕೆ ಬಣ್ಣ ಬಳಿಯಲು 12 ಮಂದಿ ಬಂದಿದ್ದರು. ಅವರೊಂದಿಗೆ ರಮೇಶ್ ಸಹ ಇದ್ದ. ಮನೆಯ ಮಾಲೀಕರೊಂದಿಗೆ ನಡೆದ ಗಲಾಟೆಯಲ್ಲಿ ಮಾಲೀಕರನ್ನೇ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಎಲ್ಲರನ್ನೂ ಬಂಧಿಸಲಾಗಿತ್ತು. 2010ರಲ್ಲಿ ಜಾಮೀನನ ಮೇಲೆ ಬಿಡುಗಡೆಯಾಗಿದ್ದ ರಮೇಶ್ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ಆರೋಪಿ ವಿರುದ್ಧ ವಾರೆಂಟ್ ಹೊರಡಿಸಿತ್ತು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಎಂ–ಸಿಸಿಟಿಎನ್ಎಸ್’ ಮೊಬೈಲ್ ಆ್ಯಪ್ ಮೂಲಕ ಬೆರಳು ಮುದ್ರೆ ಪರಿಶೀಲನೆಗೆ ಪುಟ್ಟದಾದ ಬೆರಳು ಮುದ್ರೆ ಪರಿಕರವನ್ನು ಎಲ್ಲ ಪೊಲೀಸ್ ಠಾಣೆಗಳಿಗೂ ನೀಡಲಾಗಿತ್ತು. ಈ ಪರಿಕರ ಬಳಸಿಕೊಂಡು ಮೊಬೈಲ್ ಅಪ್ಲಿಕೇಶನ್ ಮೂಲಕ ಅನುಮಾನಾಸ್ಪದ ವ್ಯಕ್ತಿಗಳ ಬೆರಳು ಮುದ್ರೆ ಪರಿಶೀಲಿಸಿದರೆ ಆ ವ್ಯಕ್ತಿ ಹಿಂದೆ ಯಾವುದಾದರೂ ಪ್ರಕರಣದಲ್ಲಿ ಭಾಗಿಯಾಗಿದ್ದರೆ ಅದರ ಮಾಹಿತಿ ತಿಳಿಯಲಿದೆ. ಇದೇ ತಂತ್ರಜ್ಞಾನ ಬಳಸಿಕೊಂಡು 12 ವರ್ಷಗಳ ಬಳಿಕ ಆರೋಪಿ ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಯಶವಂತಪುರ ಪೊಲೀಸ್ ಠಾಣೆಯ ಬಿಕೆ ನಗರದ 1ನೇ ಮುಖ್ಯರಸ್ತೆಯಲ್ಲಿ ರಮೇಶ್ ಅನುಮಾನಾಸ್ಪದವಾಗಿ ಈಚೆಗೆ ಓಡಾಟ ನಡೆಸುತ್ತಿದ್ದ. ಆತನನ್ನು ವಶಕ್ಕೆ ಪಡೆದು ಆ್ಯಪ್ ಮೂಲಕ ಬೆರಳು ಮುದ್ರೆ ಪರಿಶೀಲಿಸಿದಾಗ ಆರೋಪಿಯ ಮಾಹಿತಿ ಪೊಲೀಸರ ದತ್ತಾಂಶದಲ್ಲಿ ಇರುವುದು ದೃಢಪಟ್ಟಿತ್ತು’ ಎಂದು ಮೂಲಗಳು ತಿಳಿಸಿವೆ.</p>.<p><strong>₹ 1.30 ಕೋಟಿಯ ವಸ್ತು ಜಪ್ತಿ</strong><br />ಬೆಂಗಳೂರು: ಒಂದು ತಿಂಗಳ ಅವಧಿಯಲ್ಲಿ ದಕ್ಷಿಣ ವಿಭಾಗದ ಪೊಲೀಸರು ₹ 1.30 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. 161 ಆರೋಪಿಗಳನ್ನು ಬಂಧಿಸಿ, 176 ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ.</p>.<p>2 ಕೆ.ಜಿ. 676 ಗ್ರಾಂ ಚಿನ್ನಾಭರಣ, 134 ಬೈಕ್, 141 ಕೆ.ಜಿ ಗಾಂಜಾ, 1 ಕೆ.ಜಿ. ಎಂಡಿಎಂಎ, ₹ 3.83 ಲಕ್ಷ ಮೌಲ್ಯದ ವಿವಿಧ ಕಂಪನಿಯ 29 ಮೊಬೈಲ್ ವಶಕ್ಕೆ ಪಡೆದಿದ್ದಾರೆ.</p>.<p>ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದವರನ್ನು ಬಂಧಿಸಿ, ₹ 28 ಲಕ್ಷ ಜಪ್ತಿ ಮಾಡಲಾಗಿದೆ ಎಂದು ಡಿಸಿಪಿ ಪಿ.ಕೃಷ್ಣಕಾಂತ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>