ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಮಹಿಳಾ ಪಿಎಸ್ಐ ‌ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಕೊಲೆ ಪ್ರಕರಣದ ಆರೋಪಿ

ಗಂಭೀರ ಗಾಯ, ಐಸಿಯುನಲ್ಲಿ ಚಿಕಿತ್ಸೆ
Last Updated 16 ಜುಲೈ 2022, 6:29 IST
ಅಕ್ಷರ ಗಾತ್ರ

ಕಲಬುರಗಿ: ಶಹಾಬಾದ್ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ್ ‌ಕಂಬಾನೂರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ವಿಜಯಕುಮಾರ್ ಹಳ್ಳಿ ಎಂಬಾತನನ್ನು ಪಂಚನಾಮೆಗೆ ಕರೆದೊಯ್ದ ಸಂದರ್ಭದಲ್ಲಿ ಶಹಾಬಾದ್ ಪಿಎಸ್ಐ ಸುವರ್ಣಾ ‌ಮಲಶೆಟ್ಟಿ ಅವರ ಮೇಲೆ ಮಚ್ಚಿನಿಂದಹಲ್ಲೆ ನಡೆಸಿದ್ದಾನೆ.ಸುವರ್ಣಾ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದಕ್ಕೆ ಪ್ರತಿಯಾಗಿ ಪೊಲೀಸರು ವಿಜಯಕುಮಾರನತ್ತ ಗುಂಡು ಹಾರಿಸಿದ್ದು, ಆತನಿಗೂ ಗಾಯಗಳಾಗಿವೆ. ಇಬ್ಬರನ್ನೂ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚೆಗೆ ಗಿರೀಶ ಕಂಬಾನೂರ ಅವರನ್ನು ಎರಡು ತಲ್ವಾರ್‌ಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಎರಡು ತಂಡಗಳಲ್ಲಿ ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದರು.

ಸುವರ್ಣಾ ‌ಮಲಶೆಟ್ಟಿ ಅವರನ್ನು ಎಸ್ಪಿ ಇಶಾ ಪಂತ್ ಭೇಟಿ ಮಾಡಿ ಆರೋಗ್ಯ ‌ವಿಚಾರಿಸಿದರು. ಡಿವೈಎಸ್ಪಿ ‌ಉಮೇಶ ಚಿಕ್ಕಮಠ, ಹೆಚ್ಚುವರಿ ಎಸ್ಪಿ ಪ್ರಸನ್ನ ದೇಸಾಯಿ ಇದ್ದರು.
ಸುವರ್ಣಾ ‌ಮಲಶೆಟ್ಟಿ ಅವರನ್ನು ಎಸ್ಪಿ ಇಶಾ ಪಂತ್ ಭೇಟಿ ಮಾಡಿ ಆರೋಗ್ಯ ‌ವಿಚಾರಿಸಿದರು. ಡಿವೈಎಸ್ಪಿ ‌ಉಮೇಶ ಚಿಕ್ಕಮಠ, ಹೆಚ್ಚುವರಿ ಎಸ್ಪಿ ಪ್ರಸನ್ನ ದೇಸಾಯಿ ಇದ್ದರು.

ತಡರಾತ್ರಿ ಆರೋಪಿ ವಿಜಯಕುಮಾರ್ ಹಳ್ಳಿ ಹಾಗೂ ಇತರರನ್ನು ಬಂಧಿಸಲಾಗಿತ್ತು. ಶಹಾಬಾದ್ ಬಳಿಯ ತೊನಸನಹಳ್ಳಿ ಗ್ರಾಮದ ಬಳಿ ತಲ್ವಾರ್ ಹಾಗೂ ಬಂದೂಕು ಎಸೆದು ಹೋಗಿದ್ದ ಜಾಗದಲ್ಲಿ ಪಂಚನಾಮೆ ನಡೆಸಲು ಆರೋಪಿಗಳನ್ನು ಕರೆದೊಯ್ಯಲಾಗಿತ್ತು. ಬಂದೂಕು ಎಸೆದಿದ್ದ ಸ್ಥಳವನ್ನು ತೋರಿಸುವ ನಟನೆ ಮಾಡಿದ ವಿಜಯಕುಮಾರ್ ಹಳ್ಳಿ ಪಿಎಸ್ಐ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾ‌ನೆ. ತಕ್ಷಣ ಎಚ್ಚೆತ್ತ ಸಿಪಿಐ ಪ್ರಕಾಶ್ ಯಾತನೂರ ವಿಜಯಕುಮಾರ್‌ನತ್ತಲೂ ಗುಂಡು ಹಾರಿಸಿದರು. ಎಡಗಾಲಿಗೆ ಗಾಯವಾಗಿದೆ.

ಈ ಕುರಿತು 'ಪ್ರಜಾವಾಣಿ'ಗೆ ಪ್ರತಿಕ್ರಿಯೆ ನೀಡಿದ ಎಸ್ಪಿ ಇಶಾ ಪಂತ್, 'ಸುವರ್ಣಾ ಅವರಿಗೆ ಗಂಭೀರವಾಗಿ ಗಾಯವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರು ಏನನ್ನೂ ಹೇಳಿಲ್ಲ. ಆರೋಪಿ ವಿಜಯಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ' ಎಂದರು.

ಪಿಎಸ್ಐ ಸುವರ್ಣಾ ‌ಮಲಶೆಟ್ಟಿ
ಪಿಎಸ್ಐ ಸುವರ್ಣಾ ‌ಮಲಶೆಟ್ಟಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT