ಕಚೇರಿಯಿಂದ ಮಧ್ಯಾಹ್ನ ಊಟಕ್ಕೆ ತೆರಳುತ್ತಿದ್ದ ಜಿಲ್ಲಾಧಿಕಾರಿ, ಪ್ರತಿಭಟನಕಾರರ ಮನವಿ ಸ್ವೀಕರಿಸಲು ಮುಂದಾದರು. ಮಾಧ್ಯಮ ಪ್ರತಿನಿಧಿಗಳು ಪ್ರಕರಣದ ಬಗ್ಗೆ ಪ್ರಶ್ನಿಸುತ್ತಿದ್ದಂತೆ ಕಾರಲ್ಲಿ ಕುಳಿತು ಹೊರಡಲು ಅಣಿಯಾದರು. ಇದರಿಂದ ಕುಪಿತಗೊಂಡ ಪ್ರತಿಭಟನಕಾರರು ಜಿಲ್ಲಾಧಿಕಾರಿ ಕಾರು ತಡೆದು ಘೋಷಣೆ ಕೂಗಿದರು. ಪ್ರತಿಭಟನಕಾರರ ಆಕ್ರೋಶಕ್ಕೆ ಮಣಿದ ಜಿಲ್ಲಾಧಿಕಾರಿ ಮತ್ತೆ ಕಾರು ಇಳಿದು ಮನವಿ ಸ್ವೀಕರಿಸಿದರು.