<p><strong>ಮೈಸೂರು</strong>: ‘ಪೋಕ್ಸೊ ಪ್ರಕರಣದ ಆರೋಪಿ ಚಿತ್ರದುರ್ಗದ ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘಾ ಶರಣರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದಲ್ಲಿ ಕಾನೂನು ಪ್ರಕಾರ ನಡೆದುಕೊಳ್ಳಬೇಕು’ ಎಂದು ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.</p>.<p>ಇಲ್ಲಿ ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಗುರುವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿಯನ್ನು ಬಂಧಿಸಬೇಕಿತ್ತು. ಆದರೆ, ಸಂತ್ರಸ್ತರಿಗೆ ನ್ಯಾಯ ಕೊಡಿಸುವಲ್ಲಿ ಸರ್ಕಾರ ವಿಫಲವಾಗಿದೆ’ ಎಂದು ಆರೋಪಿಸಿದರು.</p>.<p>‘ದೇಶದಲ್ಲಿ ಕಾನೂನಿಗಿಂತಲೂ ದೊಡ್ಡವರು ಯಾರೂ ಇಲ್ಲ. ಸ್ವಾಮೀಜಿಗಳು ಕೂಡ ಸಂವಿಧಾನಕ್ಕಿಂತ ಮಿಗಿಲಾದವರೇನಲ್ಲ. ಆದರೆ, ಈ ಪ್ರಕರಣದಲ್ಲಿ ನಡೆಯುತ್ತಿರುವ ಬೆಳವಣಿಗೆಯು ಉಳ್ಳವರಿಗೊಂದು ಕಾನೂನು, ಬಡವರಿಗೊಂದು ಕಾನೂನು ಇದೆಯೇ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದೆ’ ಎಂದು ಹೇಳಿದರು.</p>.<p>‘ಪ್ರಕರಣದಲ್ಲಿ ಜನರಿಗೆ ಸತ್ಯಾಸತ್ಯತೆ ಹೊರಬರಬೇಕು. ಈ ನಿಟ್ಟಿನಲ್ಲಿ ಸರ್ಕಾರ ತ್ವರಿತವಾಗಿ ಕ್ರಮ ಜರುಗಿಸಬೇಕು. ನೊಂದವರ ಪರವಾಗಿ ಕಾರ್ಯನಿರ್ವಹಿಸಬೇಕು. ಆರೋಪಿಯನ್ನು ಕೂಡಲೇ ಬಂಧಿಸಬೇಕು. ಇದಕ್ಕಾಗಿ ಒತ್ತಾಯಿಸಿ ಸೆ.3ರಂದು ಬೆಂಗಳೂರು ಹಾಗೂ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಮೈಸೂರಿನಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>‘ರಾಜಕಾರಣಿಗಳು, ಬಲಿಷ್ಠ ಮಠದವರು ಸೇರಿ ಪೋಕ್ಸೊ ಕಾನೂನು ದುರ್ಬಲಗೊಳಿಸುವುದು ಸರಿಯಲ್ಲ. ಸಂತ್ರಸ್ತರಿಗೆ ಭಯ ಮೂಡುವಂತಹ ವಾತಾವರಣ ನಿರ್ಮಿಸಬಾರದು. ಬಲಿಷ್ಠ ರಾಜಕಾರಣ ಹಾಗೂ ಮಠದ ನಡುವೆ ಸಂತ್ರಸ್ತರ ನೋವು ಕಡೆಗಣಿಸಬಾರದು’ ಎಂದರು.</p>.<p>‘ಆರೋಪಿಯನ್ನು ಬಂಧಿಸದೆ ಸ್ಥಳ ಮಹಜರು ಮಾಡಿದ ಪೊಲೀಸರ ಕ್ರಮ ಖಂಡನೀಯ. ಸಂತ್ರಸ್ತರ ಪರವಾಗಿ ಎಲ್ಲರೂ ನಿಲ್ಲಬೇಕಾದುದು ಧರ್ಮ. ಆರೋಪಿಯನ್ನು ರಕ್ಷಿಸಲು ಒತ್ತಡ ಅಥವಾ ರಾಜಕೀಯ ಷಡ್ಯಂತ್ರ ನಡೆಸುವುದು ಸರಿಯಲ್ಲ’ ಎಂದು ಹೇಳಿದರು.</p>.<p>‘ಶ್ರೀಗಳು ತಾವಾಗಿಯೇ ವಿಚಾರಣೆಗೆ ಒಳಗಾಗಿ, ಆರೋಪ ಮುಕ್ತರಾಗಿ ಬಂದರೆ ನಾವೇ ವಿಜೃಂಭಣೆಯಿಂದ ಸ್ವಾಗತಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಪೋಕ್ಸೊ ಪ್ರಕರಣದ ಆರೋಪಿ ಚಿತ್ರದುರ್ಗದ ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘಾ ಶರಣರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದಲ್ಲಿ ಕಾನೂನು ಪ್ರಕಾರ ನಡೆದುಕೊಳ್ಳಬೇಕು’ ಎಂದು ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.</p>.<p>ಇಲ್ಲಿ ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಗುರುವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿಯನ್ನು ಬಂಧಿಸಬೇಕಿತ್ತು. ಆದರೆ, ಸಂತ್ರಸ್ತರಿಗೆ ನ್ಯಾಯ ಕೊಡಿಸುವಲ್ಲಿ ಸರ್ಕಾರ ವಿಫಲವಾಗಿದೆ’ ಎಂದು ಆರೋಪಿಸಿದರು.</p>.<p>‘ದೇಶದಲ್ಲಿ ಕಾನೂನಿಗಿಂತಲೂ ದೊಡ್ಡವರು ಯಾರೂ ಇಲ್ಲ. ಸ್ವಾಮೀಜಿಗಳು ಕೂಡ ಸಂವಿಧಾನಕ್ಕಿಂತ ಮಿಗಿಲಾದವರೇನಲ್ಲ. ಆದರೆ, ಈ ಪ್ರಕರಣದಲ್ಲಿ ನಡೆಯುತ್ತಿರುವ ಬೆಳವಣಿಗೆಯು ಉಳ್ಳವರಿಗೊಂದು ಕಾನೂನು, ಬಡವರಿಗೊಂದು ಕಾನೂನು ಇದೆಯೇ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದೆ’ ಎಂದು ಹೇಳಿದರು.</p>.<p>‘ಪ್ರಕರಣದಲ್ಲಿ ಜನರಿಗೆ ಸತ್ಯಾಸತ್ಯತೆ ಹೊರಬರಬೇಕು. ಈ ನಿಟ್ಟಿನಲ್ಲಿ ಸರ್ಕಾರ ತ್ವರಿತವಾಗಿ ಕ್ರಮ ಜರುಗಿಸಬೇಕು. ನೊಂದವರ ಪರವಾಗಿ ಕಾರ್ಯನಿರ್ವಹಿಸಬೇಕು. ಆರೋಪಿಯನ್ನು ಕೂಡಲೇ ಬಂಧಿಸಬೇಕು. ಇದಕ್ಕಾಗಿ ಒತ್ತಾಯಿಸಿ ಸೆ.3ರಂದು ಬೆಂಗಳೂರು ಹಾಗೂ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಮೈಸೂರಿನಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>‘ರಾಜಕಾರಣಿಗಳು, ಬಲಿಷ್ಠ ಮಠದವರು ಸೇರಿ ಪೋಕ್ಸೊ ಕಾನೂನು ದುರ್ಬಲಗೊಳಿಸುವುದು ಸರಿಯಲ್ಲ. ಸಂತ್ರಸ್ತರಿಗೆ ಭಯ ಮೂಡುವಂತಹ ವಾತಾವರಣ ನಿರ್ಮಿಸಬಾರದು. ಬಲಿಷ್ಠ ರಾಜಕಾರಣ ಹಾಗೂ ಮಠದ ನಡುವೆ ಸಂತ್ರಸ್ತರ ನೋವು ಕಡೆಗಣಿಸಬಾರದು’ ಎಂದರು.</p>.<p>‘ಆರೋಪಿಯನ್ನು ಬಂಧಿಸದೆ ಸ್ಥಳ ಮಹಜರು ಮಾಡಿದ ಪೊಲೀಸರ ಕ್ರಮ ಖಂಡನೀಯ. ಸಂತ್ರಸ್ತರ ಪರವಾಗಿ ಎಲ್ಲರೂ ನಿಲ್ಲಬೇಕಾದುದು ಧರ್ಮ. ಆರೋಪಿಯನ್ನು ರಕ್ಷಿಸಲು ಒತ್ತಡ ಅಥವಾ ರಾಜಕೀಯ ಷಡ್ಯಂತ್ರ ನಡೆಸುವುದು ಸರಿಯಲ್ಲ’ ಎಂದು ಹೇಳಿದರು.</p>.<p>‘ಶ್ರೀಗಳು ತಾವಾಗಿಯೇ ವಿಚಾರಣೆಗೆ ಒಳಗಾಗಿ, ಆರೋಪ ಮುಕ್ತರಾಗಿ ಬಂದರೆ ನಾವೇ ವಿಜೃಂಭಣೆಯಿಂದ ಸ್ವಾಗತಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>