<p><strong>ಚಾಮರಾಜನಗರ</strong>: ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಶ್ರೀಗಳ ಬಂಧನ ವಿಚಾರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.</p>.<p>ಕೊಳ್ಳೇಗಾಲದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಏನಾಗಿದೆ ಎಂಬುದರ ಕುರಿತು ಮಾಹಿತಿ ಇದೆ. ಈ ರೀತಿಯ ಪ್ರಕರಣ ನಡೆದಿರುವುದು ದುರಂತ. ಪ್ರಕರಣದ ಸತ್ಯಾಸತ್ಯತೆ ಹೊರಬರಲು ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ' ಎಂದರು.</p>.<p>'ಈಗಾಗಲೇ ನ್ಯಾಯಾಲಯದಲ್ಲಿ ಬಾಲಕಿಯರ ಹೇಳಿಕೆ ನೀಡಿದ್ದಾರೆ. ಪ್ರಕರಣ ನ್ಯಾಯಾಲಯದಲ್ಲಿರುವಾಗ ನಾನು ನೀವು ಈ ಬಗ್ಗೆ ಮಾತನಾಡುವುದು ಸರಿ ಅಲ್ಲ. ಕಾನೂನು ಎಲ್ಲರಿಗೂ ಒಂದೇ. ಅದಕ್ಕೆ ತಲೆ ಬಾಗೋಣ. ಸಮಾಜದಲ್ಲಿ ಎಲ್ಲವೂ ಸರಿ ಇದೆ ಅಥವಾ ಸರಿ ಇಲ್ಲ ಎಂದು ಹೇಳುವಷ್ಟು ನೀಚ ನಾನಲ್ಲ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಶ್ರೀಗಳ ಬಂಧನ ವಿಚಾರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.</p>.<p>ಕೊಳ್ಳೇಗಾಲದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಏನಾಗಿದೆ ಎಂಬುದರ ಕುರಿತು ಮಾಹಿತಿ ಇದೆ. ಈ ರೀತಿಯ ಪ್ರಕರಣ ನಡೆದಿರುವುದು ದುರಂತ. ಪ್ರಕರಣದ ಸತ್ಯಾಸತ್ಯತೆ ಹೊರಬರಲು ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ' ಎಂದರು.</p>.<p>'ಈಗಾಗಲೇ ನ್ಯಾಯಾಲಯದಲ್ಲಿ ಬಾಲಕಿಯರ ಹೇಳಿಕೆ ನೀಡಿದ್ದಾರೆ. ಪ್ರಕರಣ ನ್ಯಾಯಾಲಯದಲ್ಲಿರುವಾಗ ನಾನು ನೀವು ಈ ಬಗ್ಗೆ ಮಾತನಾಡುವುದು ಸರಿ ಅಲ್ಲ. ಕಾನೂನು ಎಲ್ಲರಿಗೂ ಒಂದೇ. ಅದಕ್ಕೆ ತಲೆ ಬಾಗೋಣ. ಸಮಾಜದಲ್ಲಿ ಎಲ್ಲವೂ ಸರಿ ಇದೆ ಅಥವಾ ಸರಿ ಇಲ್ಲ ಎಂದು ಹೇಳುವಷ್ಟು ನೀಚ ನಾನಲ್ಲ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>