ಮೈಸೂರು: ‘ಮಕ್ಕಳ ರಕ್ಷಣೆ ವಿಷಯದಲ್ಲಿ ಚಿತ್ರದುರ್ಗದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕರ್ತವ್ಯಲೋಪ ಎಸಗಿದ್ದು, ಅವರ ವಿಚಾರಣೆ ನಡೆಸಿ, ಏಳು ದಿನದಲ್ಲಿ ವರದಿ ಸಲ್ಲಿಸಬೇಕು’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಸಮಗ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ ಸೂಚಿಸಿದೆ.