ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್.ಪಾಟೀಲ್, ರಿಟ್ ಅರ್ಜಿ ತಿದ್ದುಪಡಿಗೆ ಮನವಿ ಮಾಡಿದರು. ಸರ್ಕಾರದ ಪರ ವಕೀಲರು, ಅಡ್ವೊಕೇಟ್ ಜನರಲ್ ಹಾಜರಿಲ್ಲದ ಕಾರಣ ಸಮಯಾವಕಾಶ ನೀಡುವಂತೆ ಕೋರಿದರು. ಇದೇ ವೇಳೆ ಪ್ರತಿವಾದಿ ಆಡಳಿತಾಧಿಕಾರಿ ಪಿ.ಎಸ್.ವಸ್ತ್ರದ ಪರ ಎಚ್.ಸುನಿಲ್ ಕುಮಾರ್ ವಕಾಲತ್ತು ಸಲ್ಲಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.