ಬೆಂಗಳೂರು: ಸ್ಫೋಟಕಗಳನ್ನು ದಾಸ್ತಾನು ಮಾಡುವಾಗ, ಸಾಗಣೆ ಮತ್ತು ಬಳಕೆ ಮಾಡುವಾಗ ಜಾಗರೂಕತೆ ವಹಿಸುವಂತೆ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಮನವಿ ಮಾಡಿದ್ದಾರೆ.
ಹಾಸನ ತಾಲ್ಲೂಕಿನ ಚಾಕೇನಹಳ್ಳಿಯ ಗೋದಾಮಿನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಸಂಪತ್ ಕುಟುಂಬಕ್ಕೆ ಸಾಂತ್ವಾನ ಹೇಳಿರುವ ಅವರು, ಈ ಘಟನೆಯಲ್ಲಿ ಗಾಯಗೊಂಡವರಿಗೆ ಅಗತ್ಯ ಚಿಕಿತ್ಸೆ ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.