ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿರಿಯರಾದ ಈಶ್ವರಪ್ಪನವರು ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಅಭಿಮಾನ ಪೂರ್ವಕವಾಗಿ ಹೇಳಿರಬಹುದು. ಅವರು ಹಾಗೆ ಹೇಳಿದ್ದಕ್ಕೆ ಋಣಿಯಾಗಿರುತ್ತೇನೆ. ಆದರೆ ಇಂದು ನನ್ನ ಹಿರಿಯ ಅಣ್ಣನಂತಿರುವ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರಿಗೆ ಸಹಕಾರ ನೀಡುತ್ತೇನೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.