ಬಸವಶ್ರೀ ಪ್ರಶಸ್ತಿ ಪ್ರದಾನ, ಮುರುಘಾಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಮಠಕ್ಕೆ ಭೇಟಿ ನೀಡಿದ ಗಣ್ಯರೊಂದಿಗೆ ಶಿವಮೂರ್ತಿ ಮುರುಘಾ ಶರಣರು ಇದ್ದ ಹಲವು ಫೋಟೊಗಳನ್ನು ರಾಜಾಂಗಣದಲ್ಲಿ ಹಾಕಲಾಗಿತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಶಾಸಕ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಸೇರಿದಂತೆ ಹಲವರೊಂದಿಗೆ ಮುರುಘಾಶ್ರೀ ಇದ್ದ ಚಿತ್ರಗಳು ಇಲ್ಲಿದ್ದವು. ಈ ಎಲ್ಲ ಫೋಟೊಗಳು ಅ.5ರಂದು ರಾತ್ರಿ ಕಳುವಾಗಿವೆ ಎಂದು ಎಸ್ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಬಿ.ವಸ್ತ್ರಮಠ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.