ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರುಘಾ ಶರಣರು ಅಮಿತ್‌ ಶಾ, ಯಡಿಯೂರಪ್ಪ ಮುಂತಾದವರ ಜೊತೆಗಿದ್ದ ಫೋಟೊಗಳು ಕಳವು

Last Updated 8 ಅಕ್ಟೋಬರ್ 2022, 2:58 IST
ಅಕ್ಷರ ಗಾತ್ರ

ಚಿತ್ರದುರ್ಗ: ಇಲ್ಲಿನ ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ 47 ಫೋಟೊಗಳು ಕಳುವಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸವಶ್ರೀ ಪ್ರಶಸ್ತಿ ಪ್ರದಾನ, ಮುರುಘಾಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಮಠಕ್ಕೆ ಭೇಟಿ ನೀಡಿದ ಗಣ್ಯರೊಂದಿಗೆ ಶಿವಮೂರ್ತಿ ಮುರುಘಾ ಶರಣರು ಇದ್ದ ಹಲವು ಫೋಟೊಗಳನ್ನು ರಾಜಾಂಗಣದಲ್ಲಿ ಹಾಕಲಾಗಿತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಶಾಸಕ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಸೇರಿದಂತೆ ಹಲವರೊಂದಿಗೆ ಮುರುಘಾಶ್ರೀ ಇದ್ದ ಚಿತ್ರಗಳು ಇಲ್ಲಿದ್ದವು. ಈ ಎಲ್ಲ ಫೋಟೊಗಳು ಅ.5ರಂದು ರಾತ್ರಿ ಕಳುವಾಗಿವೆ ಎಂದು ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಬಿ.ವಸ್ತ್ರಮಠ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

‘ಮಠದ ರಾಜಾಂಗಣದಲ್ಲಿದ್ದ ಫೋಟೊಗಳು ಕಳುವಾಗಿರುವ ಕುರಿತು ದೂರು ಬಂದಿತ್ತು. ದೂರು ಪರಿಶೀಲಿಸಿ ಶುಕ್ರವಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT