ಪೋಕ್ಸೊ ಪ್ರಕರಣದ ತನಿಖೆ ನಡೆಸುತ್ತಿದ್ದ ಡಿವೈಎಸ್ಪಿ ಅನಿಲ್ಕುಮಾರ್ ನೇತೃತ್ವದ ತಂಡ ವಿದ್ಯಾರ್ಥಿನಿಯ ಸಾವಿನ ಸತ್ಯಾಸತ್ಯತೆ ಅರಿಯಲು ಆಂಧ್ರಪ್ರದೇಶದ ಹಿಂದೂಪುರಕ್ಕೆ ಭೇಟಿ ನೀಡಿತ್ತು. ಮೂಲತಃ ಆಂಧ್ರಪ್ರದೇಶದ ವಿದ್ಯಾರ್ಥಿನಿ ಮುರುಘಾ ಮಠದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಹಾಸ್ಟೆಲ್ನಲ್ಲಿ ಸಂತ್ರಸ್ತ ವಿದ್ಯಾರ್ಥಿನಿಯರೊಂದಿಗೆ ಆಶ್ರಯ ಪಡೆದಿದ್ದಳು. ಮೂರು ವರ್ಷಗಳ ಹಿಂದೆ ಈ ವಿದ್ಯಾರ್ಥಿನಿ ರೈಲಿಗೆ ಸಿಲುಕಿ ಮೃತಪಟ್ಟಿರುವ ವಿಷಯ ತಿಳಿದಿತ್ತು. ಆದರೆ, ಸಹಪಾಠಿಯ ಸಾವು ಪೋಕ್ಸೊ ಸಂತ್ರಸ್ತ ವಿದ್ಯಾರ್ಥಿನಿಯರಲ್ಲಿ ಸಂಶಯ, ಆತಂಕ ಮೂಡಿಸಿತ್ತು ಎಂಬುದು ತನಿಖೆಯಿಂದ ಗೊತ್ತಾಗಿದೆ.