ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು ಪಾದಯಾತ್ರೆಗೆ ಮಠಾಧೀಶರ ಬೆಂಬಲ

Last Updated 28 ಫೆಬ್ರುವರಿ 2022, 7:34 IST
ಅಕ್ಷರ ಗಾತ್ರ

ರಾಮನಗರ: ಮೇಕೆದಾಟು ಪಾದಯಾತ್ರೆಯ ಎರಡನೇ ದಿನವಾದ ಸೋಮವಾರ ವಿವಿಧ ಮಠಾಧೀಶರು ಪಾಲ್ಗೊಂಡು ಬೆಂಬಲ ಸೂಚಿಸಿದರು.

ಚಿತ್ರದುರ್ಗದ ಮುರುಘಾ ಶರಣರ ನೇತೃತ್ವದಲ್ಲಿ ಹತ್ತಾರು ಮಠಾಧೀಶರು ಹೆಜ್ಜೆ ಹಾಕಿದರು.

ಈ ಸಂದರ್ಭ ಮಾತನಾಡಿದ ಮುರುಘಾ ಶರಣರು 'ಈ ಕಾಲಘಟ್ಟದಲ್ಲಿ ನೀರಿಗಾಗಿ ಹೋರಾಟ ಎಂಬುದು ಅನಿವಾರ್ಯ ಆಗಿದೆ. ನೀರು ನಮ್ಮೆಲ್ಲರ ಹಕ್ಕು. ಇದಕ್ಕಾಗಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಹೋರಾಟ ನಡೆದಿರುವುದು ಶ್ಲಾಘನೀಯ' ಎಂದರು.

ಸ್ವಾಮಿಗಳಾಗಿ ಸಮಾಜದ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವುದು. ಸತ್ಕಾರ್ಯಕ್ಕೆ ಬೆಂಬಲ ನೀಡುವುದು ನಮ್ಮ ಆದ್ಯ ಕರ್ತವ್ಯ. ನಮಗೆ ಯಾವುದೇ ಪ್ರಾದೇಶಿಕ ತಾರತಮ್ಯದ ಭಾವನೆ ಇಲ್ಲ. ಜನರಿಗಾಗಿ ಈ‌ ಯೋಜನೆ ಜಾರಿ ಆಗಲೇ ಬೇಕಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT