ವಿಚಾರಣೆ ವೇಳೆ ಮುರುಘಾ ಶ್ರೀಗಳ ಪರ ಹಾಜರಿದ್ದ ವಕೀಲೆ ಸ್ವಾಮಿನಿ ಗಣೇಶ್ ಮೋಹನಂಬಾಳ್ ಅವರು, "ಸಂತ್ರಸ್ತರ ಪರವಾಗಿ ಮಣಿ ಎಂಬುವರು ವಕಾಲತ್ತು ಸಲ್ಲಿಸಿದ್ದಾರೆ. ತಾವು ಬಾಲಕಿಯರ ಪೋಷಕರು ಎಂದು ಅವರು ಹೇಳಿಕೊಂಡಿದ್ದಾರೆ. ಆದರೆ, ಈ ವಕಾಲತ್ ನಾಮೆಗೆ ಸಂತ್ರಸ್ತ ಬಾಲಕಿಯರು ಒಪ್ಪಿಗೆ ನೀಡಿರುವ ಬಗ್ಗೆ ಅಧಿಕೃತ ದಾಖಲೆಯಿಲ್ಲ" ಎಂದು ಆಕ್ಷೇಪಿಸಿದರು.