‘ರಂಗಭೂಮಿ, ಸಿನಿಮಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನಟ ‘ಮುಖ್ಯಮಂತ್ರಿ’ ಚಂದ್ರು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಬಿಲ್ಲಪ್ಪ, ಬಸವತತ್ವ ಪ್ರಚಾರಕರಾದ ಹುಲುಸೂರು ಗುರುಬಸವೇಶ್ವರ ಮಠದ ಶಿವಾನಂದ ಸ್ವಾಮೀಜಿ, ಮದ್ಯಪಾನ ವಿರೋಧಿ ಹೋರಾಟಗಾರ್ತಿ ಸ್ವರ್ಣ ಭಟ್ ಹಾಗೂ ಧರ್ಮದರ್ಶಿ ಎಸ್.ಷಣ್ಮುಖಪ್ಪ ಅವರು ಮುರುಘಾಶ್ರೀ ಪ್ರಶಸ್ತಿಗೆ ಭಾಜನರಾಗಲಿದ್ದಾರೆ’ ಎಂದು ಶಿವಮೂರ್ತಿ ಮುರುಘಾ ಶರಣರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.