ಅರ್ಜಿಯಲ್ಲಿ ಏನಿದೆ?: ‘ಶಿವಮೂರ್ತಿ ಶರಣರು ಮಠ ಮತ್ತು ವಿದ್ಯಾಪೀಠಕ್ಕೆ ಏಕೈಕ (ಸೋಲ್) ಟ್ರಸ್ಟೀ ಮತ್ತು ಅಧ್ಯಕ್ಷರಾಗಿರತಕ್ಕದ್ದು ಎಂದು2010ರ ನವೆಂಬರ್ 26ರಂದು ಟ್ರಸ್ಟ್ ಡೀಡ್ ನಿಗದಿಪಡಿಸಲಾಗಿದೆ. ಇದರ ಅನುಸಾರ ಶರಣರು ಮಠ ಮತ್ತು ವಿದ್ಯಾಪೀಠಗಳ ಆಡಳಿತದ ಸಂಪೂರ್ಣ ಅಧಿಕಾರ ಹೊಂದಿದ್ದು, ಮಠ ಮತ್ತು ವಿದ್ಯಾಪೀಠದ ಬ್ಯಾಂಕ್ ಖಾತೆಯು ಅವರ ಹೆಸರಿನಲ್ಲೇ ಇರತಕ್ಕದ್ದು,ಕೇವಲ ಅಧ್ಯಕ್ಷರು ಮಾತ್ರವೇ ಇದರ ಬ್ಯಾಂಕ್ ಖಾತೆ ನಿರ್ವಹಿಸಬೇಕು. ವರ್ಷಕ್ಕೊಮ್ಮೆ ಇದರ ಲೆಕ್ಕಪರಿಶೋಧನೆಯನ್ನು ಅರ್ಹ ವ್ಯಕ್ತಿ ನಡೆಸತಕ್ಕದ್ದು’ ಎಂದು ಟ್ರಸ್ಟ್ ದಾಖಲೆಯಲ್ಲಿ ವಿವರಿಸಲಾಗಿದೆ.