‘ನಿಗಮ, ಪ್ರಾಧಿಕಾರ ರಚನೆ ವಿಷಯದಲ್ಲಿ ಸರ್ಕಾರದಿಂದ ಗೊಂದಲ ಸೃಷ್ಟಿಯಾಗಿದೆ. ಹಾಗೆ ನೋಡಿದರೆ ಮೊದಲು ಒಕ್ಕಲಿಗ ಸಮುದಾಯಕ್ಕೆ ಪ್ರಾಧಿಕಾರ ಮಾಡಬೇಕಿತ್ತು. ಒಕ್ಕಲಿಗ ಸಮುದಾಯದ ತ್ಯಾಗ, ಸೇವೆ ದೊಡ್ಡದು. ಬೆಂಗಳೂರಿಗೆ ಒಕ್ಕಲಿಗರ ಕೊಡುಗೆ ದೊಡ್ಡದಿದೆ. ಆದರೆ, ಮತಕ್ಕಾಗಿ ಪ್ರಾಧಿಕಾರ ರಚನೆ ಸರಿಯಲ್ಲ. ನಿಗಮ, ಪ್ರಾಧಿಕಾರಗಳಿಂದ ಪ್ರಯೋಜನ ಇಲ್ಲ. ನಮ್ಮ ಕಾಲದಲ್ಲೂ ಬ್ರಾಹ್ಮಣ, ಆರ್ಯ ವೈಶ್ಯ ನಿಗಮ ಮಾಡಿದ್ದೇವೆ’ ಎಂದರು.