ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ರಾಜ್ಯ ಸರ್ಕಾರ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲು ಹೊರಟಿದ್ದು ಸ್ವಾಗತಾರ್ಹ. ಆದರೆ, ಬಂಜೆಯಾದ, ವಯಸ್ಸಾದ ಗೋವುಗಳನ್ನು ನೋಡಿಕೊಳ್ಳುವವರು ಯಾರು? ಎನ್ನುವುದಕ್ಕೆ ಉತ್ತರವಿಲ್ಲ. ಅದಕ್ಕಾಗಿ ಪ್ರತಿ ಪಂಚಾಯ್ತಿಯಲ್ಲಿ ಒಂದೊಂದು ಗೋಶಾಲೆಯನ್ನು ತೆರೆಯಬೇಕು. ಆ ಮೂಲಕ ಗೋಸಾಕಾಣಿಕೆಗೆ ಸರ್ಕಾರ ವ್ಯವಸ್ಥೆ ಮಾಡಬೇಕು' ಎಂದು ಆಗ್ರಹಿಸಿದರು.