<p>ಬೆಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ‘ಸಿ’ ವರ್ಗದ ದೇವಾಲಯಗಳಲ್ಲಿ ಪ್ರಸ್ತುತ ವಾರ್ಷಿಕ ನೀಡುತ್ತಿರುವ ₹ 48 ಸಾವಿರ ತಸ್ತೀಕ್ ಅನ್ನು ಪ್ರಸಕ್ತ ಆರ್ಥಿಕ ವರ್ಷದಿಂದ ₹ 60 ಸಾವಿರಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.</p>.<p>ತಸ್ತೀಕ್ ಹಣ ಹೆಚ್ಚಿಸುವಂತೆ ಹಲವು ವರ್ಷಗಳಿಂದ ದೇವಸ್ಥಾನಗಳ ಅರ್ಚಕರು ಮನವಿಗಳನ್ನು ಸಲ್ಲಿಸಿದ್ದರು. ಅಗತ್ಯ ವಸ್ತುಗಳ ಬೆಲೆ ಗಣನೀಯವಾಗಿ ಹೆಚ್ಚಳ ಆಗಿರುವುದರಿಂದ ಪೂಜಾ ಕೈಂಕರ್ಯಗಳ ನಿರ್ವಹಣೆಗಾಗಿ ತಸ್ತೀಕ್ ಮೊತ್ತವನ್ನು ಹೆಚ್ಚಿಸುವುದಾಗಿ ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ ಭರವಸೆ ನೀಡಿದ್ದರು. ಅದಕ್ಕೆ ಪೂರಕವಾಗಿ ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಘೋಷಿಸಿದ್ದರು.</p>.<p>‘ಅರ್ಚಕರ ಪರಿಸ್ಥಿತಿ ಗಮನಿಸಿ, ತಸ್ತೀಕ್ ಹಣ ಹೆಚ್ಚಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಅವರು ಸ್ಪಂದಿಸಿದ್ದಾರೆ. ಅರ್ಚಕರ ಬಹುದಿನಗಳ ಬೇಡಿಕೆ ಈಡೇರಿದೆ’ ಎಂದು ಸಚಿವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ‘ಸಿ’ ವರ್ಗದ ದೇವಾಲಯಗಳಲ್ಲಿ ಪ್ರಸ್ತುತ ವಾರ್ಷಿಕ ನೀಡುತ್ತಿರುವ ₹ 48 ಸಾವಿರ ತಸ್ತೀಕ್ ಅನ್ನು ಪ್ರಸಕ್ತ ಆರ್ಥಿಕ ವರ್ಷದಿಂದ ₹ 60 ಸಾವಿರಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.</p>.<p>ತಸ್ತೀಕ್ ಹಣ ಹೆಚ್ಚಿಸುವಂತೆ ಹಲವು ವರ್ಷಗಳಿಂದ ದೇವಸ್ಥಾನಗಳ ಅರ್ಚಕರು ಮನವಿಗಳನ್ನು ಸಲ್ಲಿಸಿದ್ದರು. ಅಗತ್ಯ ವಸ್ತುಗಳ ಬೆಲೆ ಗಣನೀಯವಾಗಿ ಹೆಚ್ಚಳ ಆಗಿರುವುದರಿಂದ ಪೂಜಾ ಕೈಂಕರ್ಯಗಳ ನಿರ್ವಹಣೆಗಾಗಿ ತಸ್ತೀಕ್ ಮೊತ್ತವನ್ನು ಹೆಚ್ಚಿಸುವುದಾಗಿ ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ ಭರವಸೆ ನೀಡಿದ್ದರು. ಅದಕ್ಕೆ ಪೂರಕವಾಗಿ ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಘೋಷಿಸಿದ್ದರು.</p>.<p>‘ಅರ್ಚಕರ ಪರಿಸ್ಥಿತಿ ಗಮನಿಸಿ, ತಸ್ತೀಕ್ ಹಣ ಹೆಚ್ಚಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಅವರು ಸ್ಪಂದಿಸಿದ್ದಾರೆ. ಅರ್ಚಕರ ಬಹುದಿನಗಳ ಬೇಡಿಕೆ ಈಡೇರಿದೆ’ ಎಂದು ಸಚಿವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>