‘ಕರ್ನಾಟಕ ಧಾರ್ಮಿಕ ದತ್ತಿ ಕಾಯ್ದೆ ಸೆಕ್ಷನ್ 7ರ ಪ್ರಕಾರ ಮುಜರಾಯಿ ಇಲಾಖೆಯಲ್ಲಿನ ಕಾರ್ಯಭಾರಗಳ ನಿರ್ವಹಣೆಗೆ ಹಿಂದೂಯೇತರ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನೇಮಕ ಮಾಡುವಂತಿಲ್ಲ. ಆದರೆ, ಹಿಂದೂಯೇತರರನ್ನು ನೇಮಕ ಮಾಡಲಾಗಿದ್ದು, ಅವರನ್ನು ಬೇರೊಂದು ಇಲಾಖೆಗೆ ವರ್ಗಾಯಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.