<p><strong>ಬೆಂಗಳೂರು:</strong> ಮುಜರಾಯಿ ಇಲಾಖೆಗೆ ಹಿಂದೂಯೇತರ ಅಧಿಕಾರಿ ಮತ್ತು ಸಿಬ್ಬಂದಿ ನೇಮಕ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಸೋಮವಾರ ಇತ್ಯರ್ಥಪಡಿಸಿದೆ.</p>.<p>ವಕೀಲ ಎನ್.ಪಿ. ಅಮೃತೇಶ್ ಮತ್ತು ಭಾರತ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.</p>.<p>‘ಕರ್ನಾಟಕ ಧಾರ್ಮಿಕ ದತ್ತಿ ಕಾಯ್ದೆ ಸೆಕ್ಷನ್ 7ರ ಪ್ರಕಾರ ಮುಜರಾಯಿ ಇಲಾಖೆಯಲ್ಲಿನ ಕಾರ್ಯಭಾರಗಳ ನಿರ್ವಹಣೆಗೆ ಹಿಂದೂಯೇತರ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನೇಮಕ ಮಾಡುವಂತಿಲ್ಲ. ಆದರೆ, ಹಿಂದೂಯೇತರರನ್ನು ನೇಮಕ ಮಾಡಲಾಗಿದ್ದು, ಅವರನ್ನು ಬೇರೊಂದು ಇಲಾಖೆಗೆ ವರ್ಗಾಯಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.</p>.<p>‘ಸೆಕ್ಷನ್ 7ರ ಪ್ರಕಾರ ಧಾರ್ಮಿಕ ಕಾರ್ಯಭಾರಗಳ ನಿರ್ವಹಣೆಗೆ ಹಿಂದೂಯೇತರರ ನೇಮಕ ಮಾಡುವಂತಿಲ್ಲ. ಆದರೆ, ಇಲಾಖೆಯ ಕಚೇರಿ ಕಾರ್ಯಭಾರಗಳಿಗೆ ಹಿಂದೂಯೇತರರನ್ನು ನೇಮಕ ಮಾಡಲು ನಿರ್ಬಂಧ ಇಲ್ಲ’ ಎಂದು ಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಜರಾಯಿ ಇಲಾಖೆಗೆ ಹಿಂದೂಯೇತರ ಅಧಿಕಾರಿ ಮತ್ತು ಸಿಬ್ಬಂದಿ ನೇಮಕ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಸೋಮವಾರ ಇತ್ಯರ್ಥಪಡಿಸಿದೆ.</p>.<p>ವಕೀಲ ಎನ್.ಪಿ. ಅಮೃತೇಶ್ ಮತ್ತು ಭಾರತ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.</p>.<p>‘ಕರ್ನಾಟಕ ಧಾರ್ಮಿಕ ದತ್ತಿ ಕಾಯ್ದೆ ಸೆಕ್ಷನ್ 7ರ ಪ್ರಕಾರ ಮುಜರಾಯಿ ಇಲಾಖೆಯಲ್ಲಿನ ಕಾರ್ಯಭಾರಗಳ ನಿರ್ವಹಣೆಗೆ ಹಿಂದೂಯೇತರ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನೇಮಕ ಮಾಡುವಂತಿಲ್ಲ. ಆದರೆ, ಹಿಂದೂಯೇತರರನ್ನು ನೇಮಕ ಮಾಡಲಾಗಿದ್ದು, ಅವರನ್ನು ಬೇರೊಂದು ಇಲಾಖೆಗೆ ವರ್ಗಾಯಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.</p>.<p>‘ಸೆಕ್ಷನ್ 7ರ ಪ್ರಕಾರ ಧಾರ್ಮಿಕ ಕಾರ್ಯಭಾರಗಳ ನಿರ್ವಹಣೆಗೆ ಹಿಂದೂಯೇತರರ ನೇಮಕ ಮಾಡುವಂತಿಲ್ಲ. ಆದರೆ, ಇಲಾಖೆಯ ಕಚೇರಿ ಕಾರ್ಯಭಾರಗಳಿಗೆ ಹಿಂದೂಯೇತರರನ್ನು ನೇಮಕ ಮಾಡಲು ನಿರ್ಬಂಧ ಇಲ್ಲ’ ಎಂದು ಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>