ಮತ್ತೆ ನಾವೇ ಅಧಿಕಾರಕ್ಕೆ: ಇದಕ್ಕೂ ಮುನ್ನ ವರುಣಾ ವಿಧಾನಸಭಾ ಕ್ಷೇತ್ರ ದಲ್ಲಿ, ಗ್ರಾಮ ಪಂಚಾಯಿತಿ ನೂತನ ಸದಸ್ಯರಿಗೆ ಅಭಿನಂದಿಸಿ ಮಾತನಾಡಿದ ಸಿದ್ದರಾಮಯ್ಯ, ‘ಯಡಿಯೂರಪ್ಪ, ಜನರ ಆಶೀರ್ವಾದದಿಂದ ಮುಖ್ಯಮಂತ್ರಿ ಆದವರಲ್ಲ. 17 ಶಾಸಕರನ್ನು ವ್ಯಾಪಾರ ಮಾಡಿಕೊಂಡು ಸಿಎಂ ಆದವರು. ತಿಪ್ಪರಲಾಗ ಹಾಕಿದರೂ ಅವರ ಪಕ್ಷ ಮತ್ತೆ ಅಧಿಕಾರಕ್ಕೆ ಬರಲ್ಲ.ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತದೆ’ ಎಂದರು.