<p><strong>ಗೋಣಿಕೊಪ್ಪಲು (ಕೊಡಗು):</strong> ಮತ್ತಿಗೋಡು ಸಾಕಾನೆ ಶಿಬಿರದ ಬಲಾಢ್ಯ ಆನೆಯಾದ ಅಭಿಮನ್ಯು ಈ ಬಾರಿ ಮೈಸೂರು ದಸರಾ ಅಂಬಾರಿ ಹೊರಲು ಸಿದ್ಧವಾಗಿದೆ.ಅಭಿಮನ್ಯು, 750 ಕೆ.ಜಿಯ ಚಿನ್ನದ ಅಂಬಾರಿ ಹೊರಲಿದ್ದಾನೆ.</p>.<p>ಹಿಂದೆ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಂಬಾರಿ ಹೊರಲು 54ರ ಹರೆಯದ ಅಭಿಮನ್ಯುವನ್ನು ಆಯ್ಕೆ ಮಾಡಲಾಗಿದೆ’ ಎಂದು ದಸರಾ ಅಂಬಾರಿ ಆನೆ ಜವಾಬ್ದಾರಿ ಹೊತ್ತಿರುವ ಮೈಸೂರಿನ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಲೆಗ್ಸಾಂಡರ್ ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/mysore/details-of-arjuna-elephant-attraction-of-mysuru-dasara-761600.html" target="_blank">PV Web Exclusive | ವೆಲ್ಡನ್ ಅರ್ಜುನ, ಗುಡ್ಬೈ!</a></p>.<p>ಅಭಿಮನ್ಯು ಜತೆಗೆ ದಸರಾದಲ್ಲಿ ಪಾಲ್ಗೊಳ್ಳಲು ಕುಶಾಲನಗರ ದುಬಾರೆ ಸಾಕಾನೆ ಶಿಬಿರದ ವಿಕ್ರಂ (58), ಹರ್ಷ (54), ವಿಜಯ (53), ಕಾವೇರಿ (50), ಗೋಪಿ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಈ ಆನೆಗಳು ಅಕ್ಟೋಬರ್ 2ರಂದು ಸಂಪ್ರದಾಯದಂತೆ ಹುಣಸೂರು ತಾಲ್ಲೂಕಿನ ವೀರನಹೊಸಳ್ಳಿಗೆ ಪ್ರಯಾಣ ಬೆಳೆಸಿ ಬಳಿಕ ಮೈಸೂರಿಗೆ ತೆರಳಲಿವೆ.</p>.<p>ಮತ್ತಿಗೋಡು ಶಿಬಿರದಿಂದ ಅಂಬಾರಿ ಹೊರುವ ಎರಡನೇ ಆನೆ ಅಭಿಮನ್ಯು ಆಗಿದೆ. ಹಿಂದೆ ಇದೇ ಶಿಬಿರದಲ್ಲಿದ್ದ ಬಲರಾಮ ಆನೆ ಕೂಡ ಅಂಬಾರಿ ಹೊರುತ್ತಿತ್ತು. ಅದರ ನಿವೃತ್ತಿಯ ಬಳಿಕ ಈ ಜವಾಬ್ದಾರಿ ಅರ್ಜುನನ ಹೆಗಲೇರಿತ್ತು. ಅಭಿಮನ್ಯುವನ್ನು ಮಾವುತ ವಸಂತ, ಕಾವಾಡಿ ಜೆ.ಕೆ.ರಾಜು ಮುನ್ನಡೆಸಲಿದ್ದಾರೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು (ಕೊಡಗು):</strong> ಮತ್ತಿಗೋಡು ಸಾಕಾನೆ ಶಿಬಿರದ ಬಲಾಢ್ಯ ಆನೆಯಾದ ಅಭಿಮನ್ಯು ಈ ಬಾರಿ ಮೈಸೂರು ದಸರಾ ಅಂಬಾರಿ ಹೊರಲು ಸಿದ್ಧವಾಗಿದೆ.ಅಭಿಮನ್ಯು, 750 ಕೆ.ಜಿಯ ಚಿನ್ನದ ಅಂಬಾರಿ ಹೊರಲಿದ್ದಾನೆ.</p>.<p>ಹಿಂದೆ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಂಬಾರಿ ಹೊರಲು 54ರ ಹರೆಯದ ಅಭಿಮನ್ಯುವನ್ನು ಆಯ್ಕೆ ಮಾಡಲಾಗಿದೆ’ ಎಂದು ದಸರಾ ಅಂಬಾರಿ ಆನೆ ಜವಾಬ್ದಾರಿ ಹೊತ್ತಿರುವ ಮೈಸೂರಿನ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಲೆಗ್ಸಾಂಡರ್ ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/mysore/details-of-arjuna-elephant-attraction-of-mysuru-dasara-761600.html" target="_blank">PV Web Exclusive | ವೆಲ್ಡನ್ ಅರ್ಜುನ, ಗುಡ್ಬೈ!</a></p>.<p>ಅಭಿಮನ್ಯು ಜತೆಗೆ ದಸರಾದಲ್ಲಿ ಪಾಲ್ಗೊಳ್ಳಲು ಕುಶಾಲನಗರ ದುಬಾರೆ ಸಾಕಾನೆ ಶಿಬಿರದ ವಿಕ್ರಂ (58), ಹರ್ಷ (54), ವಿಜಯ (53), ಕಾವೇರಿ (50), ಗೋಪಿ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಈ ಆನೆಗಳು ಅಕ್ಟೋಬರ್ 2ರಂದು ಸಂಪ್ರದಾಯದಂತೆ ಹುಣಸೂರು ತಾಲ್ಲೂಕಿನ ವೀರನಹೊಸಳ್ಳಿಗೆ ಪ್ರಯಾಣ ಬೆಳೆಸಿ ಬಳಿಕ ಮೈಸೂರಿಗೆ ತೆರಳಲಿವೆ.</p>.<p>ಮತ್ತಿಗೋಡು ಶಿಬಿರದಿಂದ ಅಂಬಾರಿ ಹೊರುವ ಎರಡನೇ ಆನೆ ಅಭಿಮನ್ಯು ಆಗಿದೆ. ಹಿಂದೆ ಇದೇ ಶಿಬಿರದಲ್ಲಿದ್ದ ಬಲರಾಮ ಆನೆ ಕೂಡ ಅಂಬಾರಿ ಹೊರುತ್ತಿತ್ತು. ಅದರ ನಿವೃತ್ತಿಯ ಬಳಿಕ ಈ ಜವಾಬ್ದಾರಿ ಅರ್ಜುನನ ಹೆಗಲೇರಿತ್ತು. ಅಭಿಮನ್ಯುವನ್ನು ಮಾವುತ ವಸಂತ, ಕಾವಾಡಿ ಜೆ.ಕೆ.ರಾಜು ಮುನ್ನಡೆಸಲಿದ್ದಾರೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>