ಕಾವೇರಿ ತಾಯಿಯ ಪೂಜೆ ಮಾಡಿ ಬಾಗಿನ ಅರ್ಪಿಸಲಾಗಿದೆ. ಕಬಿನಿಯಲ್ಲಿ ಮತ್ತೆ ಐದನೇ ವರ್ಷಕ್ಕೆ ಬಾಗಿನ ಅರ್ಪಿಸಲು ಸೌಭಾಗ್ಯ ನನಗೆ ಸಿಕ್ಕಿದೆ. ಇಂದು ರಾಜ್ಯದ ಎಲ್ಲ ಜಲಾಶಯಗಳಲ್ಲೂ ತುಂಬಿ ತುಳುಕುತ್ತಿದ್ದು, ಅಂತರ್ಜಲ ಕುಸಿಯುವುದು ತಪ್ಪಿದೆ. ಈ ಬಾರಿ ನಿರೀಕ್ಷೆಗೂ ಮೀರಿ ಉತ್ತಮ ಮಳೆ ಕಾಣುತ್ತಿದೆ. ಪ್ರತಿವರ್ಷವೂ ಇದೇ ರೀತಿಯಲ್ಲಿ ಮಳೆ-ಬೆಳೆಯಾಗಲಿ ಎಂದರು.