ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಐವರು ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.
ಇವರು ಮೊದಲು ದರೋಡೆಗೆ ಪ್ರಯತ್ನಪಟ್ಟು ನಂತರ ಅತ್ಯಾಚಾರ ಎಸಗಿದ್ದಾರೆ. ಇವರಲ್ಲಿ ಒಬ್ಬ ಬಾಲಕನಾಗಿದ್ದಾನೆ ಎಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಆರೋಪಿಗಳ ವಿರುದ್ದ ಬಲವಾದ ಸಾಕ್ಷ್ಯಾಧಾರಗಳು ದೊರೆತಿದ್ದು, ಅವುಗಳನ್ನು ಈಗ ಬಹಿರಂಗಪಡಿಸಲು ಸಾಧ್ಯ ಇಲ್ಲ ಎಂದು ತಿಳಿಸಿದರು.