ಇಬ್ಬರು ಮಹಾರಾಷ್ಟ್ರದಲ್ಲೇ ಉಳಿದರೆ, ಮತ್ತೊಬ್ಬ ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಿದ್ದ. ರಾಜಸ್ಥಾನಕ್ಕೆ ಇಬ್ಬರು ಹಾಗೂ ಜಮ್ಮು– ಕಾಶ್ಮೀರಕ್ಕೆ ಒಬ್ಬ ಆರೋಪಿ ಪರಾರಿಯಾಗಿದ್ದಾರೆಂಬ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ನಗರದ ಪೊಲೀಸರೊಂದಿಗೆ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಹಾಗೂ ಬೆಂಗಳೂರಿನ 120 ಪೊಲೀಸರನ್ನು ಒಳಗೊಂಡ ಒಟ್ಟು ಏಳು ತಂಡಗಳನ್ನು ರಚಿಸಲಾಗಿತ್ತು.