‘ನಮ್ಮೂರು ಕೆ.ಆರ್.ಪೇಟೆ ತಾಲ್ಲೂಕಿನ ಗೋವಿಂದನಹಳ್ಳಿ ಗ್ರಾಮ. ತಾಯಿ ಡಿ.ಬಿ.ಭಾಗ್ಯಾ ಪದವಿ ಓದಿದ್ದಾರೆ. ಗುತ್ತಿಗೆದಾರರಾಗಿರುವ ತಂದೆ ಜಿ.ಎಂ.ಮಹಾದೇವ್ ಹೆಚ್ಚು ಓದಿಲ್ಲ. ಆದರೆ, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕೆಂದು ಇಡೀ ಕುಟುಂಬವನ್ನೇ ಮೈಸೂರು ನಗರಕ್ಕೆ ಸ್ಥಳಾಂತರ ಮಾಡಿದರು. ಆಗ ನಾನು ಐದನೇ ತರಗತಿ ಓದುತ್ತಿದ್ದೆ. ಈಗ ಅವರ ಕನಸು ನನಸಾಗಿದ್ದು, ತುಂಬಾ ಖುಷಿಯಾಗಿದ್ದಾರೆ. ತಮ್ಮ ಎಂಜಿನಿಯರಿಂಗ್ ಓದುತ್ತಿದ್ದಾನೆ’ ಎಂದು ಭಾವನಾ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.