ಮಹಾದೇವಸ್ವಾಮಿ ಅವರು 7 ರಾತ್ರಿಗಳ ಕಾಲ ಮಲೆ ಮಹಾದೇಶ್ವರನ 7 ಅಧ್ಯಾಯದ ಕತೆ ಹೇಳುತ್ತಾರೆ. 4 ರಾತ್ರಿಗಳ ಕಾಲ ಮಂಟೆಸ್ವಾಮಿ ಕತೆ ಬಿಚ್ಚಿಡುತ್ತಾರೆ. ಸಂಕಮ್ಮ, ನಂಜುಂಡೇಶ್ವರ, ಬಿಳಿಗಿರಿ ರಂಗನಾಥ, ನೀಲವೇಣಿ, ಚಾಮುಂಡೇಶ್ವರಿ ಮುಂತಾದ ಜನಪದ ಕತೆಗಳನ್ನು ತಮ್ಮ ನೆನಪಿನ ಅಂಗಳದಲ್ಲಿ ತುಂಬಿಕೊಂಡಿದ್ದಾರೆ. ಹೆಗಲ ಮೇಲೆ ತಂಬೂರಿ, ಬೆರಳಲ್ಲಿ ಗಗ್ರ ಹಿಡಿದು ಕೂತರೆ ಹಗಲು– ರಾತ್ರಿಗಳ ವ್ಯತ್ಯಾಸ ಮರೆತು ಹೋಗುತ್ತದೆ.