<p><strong>ಮೈಸೂರು: </strong>ದಸರಾ ಮಹೋತ್ಸವವು ಅ.7 ರಂದು ಬೆಳಿಗ್ಗೆ 8.15 ರಿಂದ 8.45 ರೊಳಗಿನ ಶುಭಮುಹೂರ್ತದಲ್ಲಿ ಚಾಮುಂಡಿಬೆಟ್ಟದಲ್ಲಿ ಉದ್ಘಾಟನೆಗೊಳ್ಳಲಿದೆ.</p>.<p>‘ಅ.15 ರಂದು ವಿಜಯದಶಮಿ ದಿನ ಸಂಜೆ 4.36 ರಿಂದ 4.46ರ ಅವಧಿಯಲ್ಲಿ ನಂದಿಧ್ವಜ ಪೂಜೆ ನಡೆಯಲಿದೆ. 5.00 ರಿಂದ 5.30ರ ಒಳಗೆ ಜಂಬೂ ಸವಾರಿ ನಡೆಯಲಿದ್ದು, ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರಲಿದೆ. ಜಂಬೂ ಸವಾರಿಯಲ್ಲಿ ಎಂಟು ಆನೆಗಳು ಪಾಲ್ಗೊಳ್ಳಲಿವೆ. ನವರಾತ್ರಿಯ ಎಲ್ಲಾ ದಿನ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಬುಧವಾರ ದಸರಾ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ತಿಳಿಸಿದರು.</p>.<p class="Subhead">ಸೆ.16 ರಂದು ಗಜಪಡೆಗೆ ಸ್ವಾಗತ: ‘ಉತ್ಸವದಲ್ಲಿ ಪಾಲ್ಗೊಳ್ಳಲಿರುವ ಗಜಪಡೆಯನ್ನು ಸೆ.16 ರಂದು ಬೆಳಿಗ್ಗೆ 8.36ಕ್ಕೆ ಅರಮನೆಗೆ ಸ್ವಾಗತಿಸಲಾಗುವುದು. ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಸೆ.13 ರಂದು ಗಜಪಯಣ ಕಾರ್ಯಕ್ರಮ ಸರಳವಾಗಿ ನಡೆಯಲಿದೆ’ ಎಂದು ಮಾಹಿತಿ ನೀಡಿದರು.</p>.<p>ಈ ಬಾರಿ 150 ರಸ್ತೆಮತ್ತು 77 ವೃತ್ತಗಳು ಸೇರಿದಂತೆ ಒಟ್ಟು 100 ಕಿ.ಮೀ ದೀಪಾಲಂಕಾರ ಮಾಡಲು ನಿರ್ಧರಿಸಲಾಗಿದೆ. ಹಿಂದಿನ ವರ್ಷ 60 ಕಿಮೀ ದೀಪಾಲಂಕಾರ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ದಸರಾ ಮಹೋತ್ಸವವು ಅ.7 ರಂದು ಬೆಳಿಗ್ಗೆ 8.15 ರಿಂದ 8.45 ರೊಳಗಿನ ಶುಭಮುಹೂರ್ತದಲ್ಲಿ ಚಾಮುಂಡಿಬೆಟ್ಟದಲ್ಲಿ ಉದ್ಘಾಟನೆಗೊಳ್ಳಲಿದೆ.</p>.<p>‘ಅ.15 ರಂದು ವಿಜಯದಶಮಿ ದಿನ ಸಂಜೆ 4.36 ರಿಂದ 4.46ರ ಅವಧಿಯಲ್ಲಿ ನಂದಿಧ್ವಜ ಪೂಜೆ ನಡೆಯಲಿದೆ. 5.00 ರಿಂದ 5.30ರ ಒಳಗೆ ಜಂಬೂ ಸವಾರಿ ನಡೆಯಲಿದ್ದು, ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರಲಿದೆ. ಜಂಬೂ ಸವಾರಿಯಲ್ಲಿ ಎಂಟು ಆನೆಗಳು ಪಾಲ್ಗೊಳ್ಳಲಿವೆ. ನವರಾತ್ರಿಯ ಎಲ್ಲಾ ದಿನ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಬುಧವಾರ ದಸರಾ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ತಿಳಿಸಿದರು.</p>.<p class="Subhead">ಸೆ.16 ರಂದು ಗಜಪಡೆಗೆ ಸ್ವಾಗತ: ‘ಉತ್ಸವದಲ್ಲಿ ಪಾಲ್ಗೊಳ್ಳಲಿರುವ ಗಜಪಡೆಯನ್ನು ಸೆ.16 ರಂದು ಬೆಳಿಗ್ಗೆ 8.36ಕ್ಕೆ ಅರಮನೆಗೆ ಸ್ವಾಗತಿಸಲಾಗುವುದು. ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಸೆ.13 ರಂದು ಗಜಪಯಣ ಕಾರ್ಯಕ್ರಮ ಸರಳವಾಗಿ ನಡೆಯಲಿದೆ’ ಎಂದು ಮಾಹಿತಿ ನೀಡಿದರು.</p>.<p>ಈ ಬಾರಿ 150 ರಸ್ತೆಮತ್ತು 77 ವೃತ್ತಗಳು ಸೇರಿದಂತೆ ಒಟ್ಟು 100 ಕಿ.ಮೀ ದೀಪಾಲಂಕಾರ ಮಾಡಲು ನಿರ್ಧರಿಸಲಾಗಿದೆ. ಹಿಂದಿನ ವರ್ಷ 60 ಕಿಮೀ ದೀಪಾಲಂಕಾರ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>