ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನೂರ ಮಹಾದೇವರದ್ದು ಕೃತಿಯಲ್ಲ, ವಿಕೃತಿ: ಪ್ರತಾಪ ಸಿಂಹ ಟೀಕೆ

Last Updated 13 ಜುಲೈ 2022, 9:55 IST
ಅಕ್ಷರ ಗಾತ್ರ

ಮೈಸೂರು: ‘ಸಾಹಿತಿ ದೇವನೂರ ಮಹಾದೇವ ಆರ್‌ಎಸ್‌ಎಸ್‌ ಕುರಿತು ರಚಿಸಿರುವುದು (ಆರ್‌ಎಸ್‌ಎಸ್‌ ಆಳ ಮತ್ತು ಅಗಲ) ಕೃತಿಯಲ್ಲ, ಅದು ವಿಕೃತಿ’ ಎಂದು ಸಂಸದ ಪ್ರತಾಪ ಸಿಂಹ ಕಿಡಿಕಾರಿದರು.

ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಕಾಂಗ್ರೆಸ್‌ಗೆ ಆಳಾಗಿ ಬರೆಯುವವರಿಗೆ ಆರ್‌ಎಸ್ಎಸ್‌ನ ಆಳ–ಅಗಲ ತಿಳಿದುಕೊಳ್ಳಲು ಸಾಧ್ಯವಿಲ್ಲ. ದೇವನೂರ ಮಹಾದೇವ ಒಂದು ಪಕ್ಷದ ಆಳಾಗಿ ಬರೆದಿದ್ದಾರೆ’ ಎಂದು ಟೀಕಿಸಿದರು.

‘ಕುಸುಮಬಾಲೆ’ ನಂತರ ದೇವನೂರ ಅವರಲ್ಲಿ ಒಂದಷ್ಟು ಸೃಜನಶೀಲತೆ ಉಳಿದುಕೊಂಡಿದೆ ಎಂದುಕೊಂಡಿದ್ದೆ. ಆದರೆ, ಆರ್‌ಎಸ್‌ಎಸ್ ಆಳ–ಅಗಲ ಪುಸ್ತಕ ಬರೆಯಲು ಹೋಗಿ ಅವರ ಘನತೆಯನ್ನು ಕಳೆದುಕೊಂಡಿದ್ದಾರೆ. ಚಾತುರ್ವರ್ಣ ಪದ್ಧತಿ ಬಗ್ಗೆ ಬರೆಯಲು ಹೋಗಿದ್ದಾರೆ. ಒಂದು ಧರ್ಮ, ಒಬ್ಬ ನಾಯಕ, ಒಂದು ದೇಶವನ್ನು ಆರ್‌ಎಸ್‌ಎಸ್‌ ಪ್ರತಿಪಾದಿಸುತ್ತದೆ ಎಂದು ಬರೆದಿದ್ದಾರೆ. ಆದರೆ, ಒಬ್ಬ ವ್ಯಕ್ತಿ, ಒಂದು ಪುಸ್ತಕ, ಒಂದು ದೇಶದಿಂದ, ಇಡೀ ಪ್ರಪಂಚದಲ್ಲಿ ಭಯೋತ್ಪಾದನೆ ಹೆಚ್ಚಾಗಿದೆ. ಈ ಬಗ್ಗೆ ಮಹಾದೇವ ಮಾತನಾಡುವುದಿಲ್ಲ ಏಕೆ?’ ಎಂದು ಕೇಳಿದರು.

‘ಚಾತುರ್ವರ್ಣ ಪದ್ಧತಿ ಹಿಂದೂ ಧರ್ಮದಲ್ಲಷ್ಟೆ ಇಲ್ಲ. ಕ್ರೈಸ್ತ ಧರ್ಮದಲ್ಲೂ ಪಂಥಗಳಿವೆ. ಇಸ್ಲಾಂ ಧರ್ಮದಲ್ಲೂ ಜಾತಿಗಳಿವೆ. ಚಾತುರ್ವರ್ಣ ವಿರೋಧಿಸುವುದಾದರೆ ಎಲ್ಲಾ ಧರ್ಮಗಳ ಬಗ್ಗೆಯೂ ಅವರು ಮಾತನಾಡಲಿ. ಮಹಾದೇವ ಅವರು ಅಂಬಾನಿ, ಅದಾನಿ ಆದಾಯ ಜಾಸ್ತಿಯಾಗಿದೆ, ಬ್ಯಾಂಕ್‌ಗಳ ಸಾಲ ಎಂಬಿತ್ಯಾದಿಯಾಗಿ ಏನೇನೋ ಬರೆದಿದ್ದಾರೆ. ಇವೆಲ್ಲವನ್ನೂ ಗಮನಿಸಿದರೆ ಒಬ್ಬ ಕಾಂಗ್ರೆಸ್‌ನ ಕಾರ್ಯಕರ್ತ, ರಾಹುಲ್ ಗಾಂಧಿ ಭಾಷಣದಿಂದ ಪ್ರೇರಿತನಾಗಿ ಬರೆದಂತಿದೆ. ಸಿದ್ದರಾಮಯ್ಯ ಅವರು ದೇವನೂರ ಮಹದೇವ ಜೊತೆ ಮಾತನಾಡಿ ಅವರ ಹೆಸರನ್ನು ಹಾಕಿಸಿದ್ದಾರೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT