ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೊ’ ಯಾತ್ರೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಆಗಮಿಸಿರುವ ಅವರು, ಎಚ್.ಡಿ.ಕೋಟೆ ತಾಲ್ಲೂಕಿನ ಬೀರಂಬಳ್ಳಿ ಸಮೀಪದಲ್ಲಿರುವ ‘ಆರೆಂಜ್ ಕೌಂಟಿ’ ರೆಸಾರ್ಟ್ನಲ್ಲಿ ತಂಗಿದ್ದಾರೆ. ದಸರಾ ಹಬ್ಬದ ಅಂಗವಾಗಿ ಜೋಡೊ ಯಾತ್ರೆಗೆ ಎರಡು ದಿನಗಳ ಬಿಡುವು ನೀಡಲಾಗಿತ್ತು. ಯಾತ್ರೆಯು ಮಂಡ್ಯ ಜಿಲ್ಲೆಯಲ್ಲಿ ಮುಂದುವರಿಯಲಿದ್ದು, ಸೋನಿಯಾ ಗಾಂಧಿ ಪುತ್ರ ರಾಹುಲ್ ಗಾಂಧಿ ಮತ್ತು ನಾಯಕರೊಂದಿಗೆ ಹೆಜ್ಜೆ ಹಾಕಲಿದ್ದಾರೆ.