<p><strong>ಮೈಸೂರು</strong>: ‘ಸಮಸಮಾಜದ ನಿರ್ಮಾಣಕ್ಕಾಗಿ ಹೋರಾಡಿದ್ದ ಬಸವಣ್ಣನ ವಿಚಾರ ಒಂದು ಧರ್ಮಕ್ಕಷ್ಟೇ ಸೀಮಿತವಾದುದಲ್ಲ. ಸಮಾಜದಲ್ಲಿ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಅಸಮಾನತೆ ಇಂದಿಗೂ ಇರುವುದೇಕೆ ಎಂದು ಎಲ್ಲ ಬಸವ ಭಕ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಹೇಳಿದರು.</p>.<p>ನಗರದ ಸುತ್ತೂರು ಶಾಖಾ ಮಠದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯತ ಸಂಘ–ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟದ ರಜತ ಮಹೋತ್ಸವ ನಿಮಿತ್ತ ‘ಬೆಳ್ಳಿ ಬೆಳಗು’ ಸಮಾರಂಭ ಉದ್ಘಾಟಿಸಿ ಶನಿವಾರ ಮಾತನಾಡಿದರು.</p>.<p>‘ಅಸಮಾನತೆ, ಮೂಢನಂಬಿಕೆ ಹಾಗೂ ಲಿಂಗ ತಾರತಮ್ಯದ ವಿರುದ್ಧ ಬಸವಣ್ಣ ಹೋರಾಡಿದ್ದರು. ಆ ಪದ್ಧತಿಗಳು ಇಂದಿಗೂ ಇವೆ. ಎಲ್ಲರಿಗೂ ಸಮಾನತೆ ದೊರೆತಿಲ್ಲ. ಮಹಿಳೆಯರ ಮೇಲಿನ ದೌರ್ಜನ್ಯ ನಿಂತಿಲ್ಲ. ಸಂಪತ್ತಿನ ಹಂಚಿಕೆಯಾಗಿಲ್ಲ. ಬಸವಣ್ಣ ಈಗಲೂ ಪ್ರಸ್ತುತವಾಗಬೇಕಾದ ಪರಿಸ್ಥಿತಿ ಬರಬೇಕಾಗಿತ್ತಾ’ ಎಂದು ಅವರು ಪ್ರಶ್ನಿಸಿದರು.</p>.<p>‘ಬಸವಣ್ಣನವರ ವಿಚಾರಗಳ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಸಂಕಲ್ಪ ತೊಡಬೇಕು. ಆರ್ಥಿಕ ಅಭಿವೃದ್ಧಿಯಲ್ಲಿ ಎಲ್ಲರಿಗೂ ಪಾಲು ಸಿಗದಿದ್ದರೆ ಸಮಗ್ರ ಅಭಿವೃದ್ಧಿ ಆಗುವುದಿಲ್ಲ’ ಎಂದರು.</p>.<p>ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ವೀರಶೈವ ಲಿಂಗಾಯತ ಸಂಘ–ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟದ ಅಧ್ಯಕ್ಷ ಎಲ್.ಎಸ್.ಮಹದೇವಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಸಮಸಮಾಜದ ನಿರ್ಮಾಣಕ್ಕಾಗಿ ಹೋರಾಡಿದ್ದ ಬಸವಣ್ಣನ ವಿಚಾರ ಒಂದು ಧರ್ಮಕ್ಕಷ್ಟೇ ಸೀಮಿತವಾದುದಲ್ಲ. ಸಮಾಜದಲ್ಲಿ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಅಸಮಾನತೆ ಇಂದಿಗೂ ಇರುವುದೇಕೆ ಎಂದು ಎಲ್ಲ ಬಸವ ಭಕ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಹೇಳಿದರು.</p>.<p>ನಗರದ ಸುತ್ತೂರು ಶಾಖಾ ಮಠದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯತ ಸಂಘ–ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟದ ರಜತ ಮಹೋತ್ಸವ ನಿಮಿತ್ತ ‘ಬೆಳ್ಳಿ ಬೆಳಗು’ ಸಮಾರಂಭ ಉದ್ಘಾಟಿಸಿ ಶನಿವಾರ ಮಾತನಾಡಿದರು.</p>.<p>‘ಅಸಮಾನತೆ, ಮೂಢನಂಬಿಕೆ ಹಾಗೂ ಲಿಂಗ ತಾರತಮ್ಯದ ವಿರುದ್ಧ ಬಸವಣ್ಣ ಹೋರಾಡಿದ್ದರು. ಆ ಪದ್ಧತಿಗಳು ಇಂದಿಗೂ ಇವೆ. ಎಲ್ಲರಿಗೂ ಸಮಾನತೆ ದೊರೆತಿಲ್ಲ. ಮಹಿಳೆಯರ ಮೇಲಿನ ದೌರ್ಜನ್ಯ ನಿಂತಿಲ್ಲ. ಸಂಪತ್ತಿನ ಹಂಚಿಕೆಯಾಗಿಲ್ಲ. ಬಸವಣ್ಣ ಈಗಲೂ ಪ್ರಸ್ತುತವಾಗಬೇಕಾದ ಪರಿಸ್ಥಿತಿ ಬರಬೇಕಾಗಿತ್ತಾ’ ಎಂದು ಅವರು ಪ್ರಶ್ನಿಸಿದರು.</p>.<p>‘ಬಸವಣ್ಣನವರ ವಿಚಾರಗಳ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಸಂಕಲ್ಪ ತೊಡಬೇಕು. ಆರ್ಥಿಕ ಅಭಿವೃದ್ಧಿಯಲ್ಲಿ ಎಲ್ಲರಿಗೂ ಪಾಲು ಸಿಗದಿದ್ದರೆ ಸಮಗ್ರ ಅಭಿವೃದ್ಧಿ ಆಗುವುದಿಲ್ಲ’ ಎಂದರು.</p>.<p>ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ವೀರಶೈವ ಲಿಂಗಾಯತ ಸಂಘ–ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟದ ಅಧ್ಯಕ್ಷ ಎಲ್.ಎಸ್.ಮಹದೇವಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>