ಕೆಪಿಎಸ್ಸಿ ಎಫ್ಡಿಎ ನೇಮಕಾತಿ ಪ್ರಕ್ರಿಯೆಯಲ್ಲಿ ಬಸವರಾಜು ಎಂಬುವರಿಗೆ ಹುದ್ದೆ ಕೊಡಿಸಲು ಬಾಗಲಕೋಟೆ ಜಿಲ್ಲೆಯ ಸಂಗಮೇಶ ಝಳಕಿ ಎಂಬುವರ ಜೊತೆ ಆರೋಪಿ ಪಿಎಸ್ಐ ಮಾತನಾಡಿದ್ದೆನ್ನಲಾದ ಮೊಬೈಲ್ ಹಾಗೂ ವಾಟ್ಸ್ಆ್ಯಪ್ ಆಡಿಯೊ ಸಂಭಾಷಣೆಗಳು ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಅಲ್ಲದೆ, ಹಣ ಅಕ್ರಮ ವರ್ಗಾವಣೆಯ ಬ್ಯಾಂಕ್ ಸ್ಟೇಟ್ಮೆಂಟ್ ಕೂಡ ಮಾಧ್ಯಮಗಳಲ್ಲಿ ಬಿತ್ತರಗೊಂಡಿತ್ತು.