ಡಿ. 8ರಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ‘ನುಡಿಹಬ್ಬ’ (ಘಟಿಕೋತ್ಸವ) ನಡೆಯಲಿದ್ದು, ಆ ದಿನ ಮೂವರಿಗೂ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ‘ನಾಡೋಜ‘ ಪ್ರದಾನ ಮಾಡುವರು. ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಡಿ.ಲಿಟ್ ಹಾಗೂ ಪಿಎಚ್.ಡಿ ಪದವಿ ಪ್ರದಾನ ಮಾಡುವರು.