2019ರ ಜ. 19ರಂದು ಮಂಡ್ಯ ಜಿಲ್ಲಾಧಿಕಾರಿ ಅವರು ನೇರ ಖರೀದಿ ಮೂಲಕ ದರ ನಿರ್ಧರಿಸಿದ್ದಾರೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿರುವ ಕಾವೇರಿ ನೀರಾವರಿ ನಿಗಮದ ಬಂಡವಾಳ ಲೆಕ್ಕ ಶೀರ್ಷಿಕೆ ಅಡಿ ಬಿಡುಗಡೆಯಾಗುವ ಅನುದಾನದಲ್ಲೇ ಭೂಸ್ವಾಧೀನ ಪ್ರಕರಣಗಳಿಗೆ ಪಾವತಿ ಮಾಡಬಹುದು. ಇದಕ್ಕಾಗಿ ಸರ್ಕಾರ ₹ 200 ಕೋಟಿ ಕಾಯ್ದಿರಿಸಿದ್ದು, ಪರಿಹಾರ ನೀಡುವುದಕ್ಕೂ ಇದನ್ನು ಬಳಸಬಹುದು ಎಂದು ಸಚಿವರು ತಿಳಿಸಿದರು.