ಎಚ್.ಡಿ.ಕೋಟೆ (ಮೈಸೂರು ಜಿಲ್ಲೆ): ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಅಂತರಸಂತೆ ವನ್ಯಜೀವಿ ವಲಯ ವ್ಯಾಪ್ತಿಯ ಕಾಡಂಚಿನಲ್ಲಿ ಉರುಳಿಗೆ ಸಿಲುಕಿ ತಾಯಿ ಹುಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಅದರ ಮೂರು ಮರಿಗಳನ್ನು ರಕ್ಷಿಸಲು ಅರಣ್ಯ ಇಲಾಖೆ ಕ್ರಮ ವಹಿಸಿದೆ. ನಾಲ್ಕು ಆನೆಗಳನ್ನು ಬಳಸಿಕೊಂಡು ಭಾನುವಾರ ಪತ್ತೆ ಕಾರ್ಯಾಚರಣೆ ಆರಂಭಿಸಿದೆ.