ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೋಟಗಾರಿಕೆ ಇಲಾಖೆ ನಿರ್ದೇಶಕರಾಗಿ ನಾಗೇಂದ್ರ ಪ್ರಸಾದ್‌

Last Updated 9 ಜುಲೈ 2021, 22:04 IST
ಅಕ್ಷರ ಗಾತ್ರ

ಬೆಂಗಳೂರು: ಮೂವರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದ್ದು, ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರದ (ರೇರಾ) ಕಾರ್ಯದರ್ಶಿಯಾಗಿದ್ದ ಕೆ.ನಾಗೇಂದ್ರ ಪ್ರಸಾದ್‌ ಅವರನ್ನು ತೋಟಗಾರಿಕಾ ಇಲಾಖೆ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ತೋಟಗಾರಿಕೆ ಇಲಾಖೆ ನಿರ್ದೇಶಕರ ಹುದ್ದೆಯಲ್ಲಿದ್ದ ಫೌಝಿಯಾ ತರನ್ನುಮ್‌ ಅವರನ್ನು ಕೊಪ್ಪಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ನಾಗೇಂದ್ರ ಪ್ರಸಾದ್‌ ಅವರಿಗೆ ರೇರಾ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ವಹಿಸಲಾಗಿದೆ.

ಕರ್ನಾಟಕ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಾನಂದ ಕಾಪಸಿ ಅವರಿಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹೆಚ್ಚುವರಿ ಪ್ರಭಾರವನ್ನೂ ವಹಿಸಿ ಆದೇಶ ಹೊರಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT