ಮಂಗಳೂರು: ‘ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಮಂತ್ರ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವಕ್ಕೆ ಜನತೆ ಆಶೀರ್ವದಿಸಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದರು.
ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ‘ಶಿರಾದಲ್ಲಿ ಪಕ್ಷದ ಪಂಚ ಪಾಂಡವರು ಹಾಗೂ ಆರ್.ಆರ್. ನಗರದಲ್ಲಿ ಆರ್.ಅಶೋಕ ಹಾಗೂ ಅರವಿಂದ ಲಿಂಬಾವಳಿ ಅವರು ಜೋಡೆತ್ತು ರೀತಿಯಲ್ಲಿ ಕಾರ್ಯಕರ್ತರ ಜೊತೆ ದುಡಿದು ಗೆಲ್ಲಿಸಿದ್ದಾರೆ’ ಎಂದರು.