‘ಬಿಜೆಪಿ ಮುಂದಿನ ಚುವಾವಣೆ ದೃಷ್ಟಿಯಿಂದ ಪೇಜ್ ಕಮಿಟಿಯಿಂದ ಆರಂಭಿಸಿ ಬೂತ್ ಸಶಕ್ತೀಕರಣ ಕಾರ್ಯವನ್ನು ಪೂರ್ಣಗೊಳಿ
ಸಿದ್ದೇವೆ. ಚುನಾವಣೆಗೆ ಕಾರ್ಯಕರ್ತರನ್ನು ಸೈನಿಕರ ರೀತಿಯಲ್ಲಿ ಸಿದ್ಧತೆ ನಡೆಸಿದ್ದೇವೆ. ಮತಗಟ್ಟೆಯಲ್ಲೂ ವಾರ್ ರೂಂಗಳು ಆರಂಭಗೊಂಡಿವೆ. ಇಲ್ಲಿನ ವಾರ್ ರೂಂ ಮೂಲಕ ಜಿಲ್ಲೆ, ಜಿಲ್ಲೆಯಿಂದ ಮಂಡಲ, ಮಂಡಲದಿಂದ ಮತಗಟ್ಟೆವರೆಗೆ, ಮತಗಟ್ಟೆಯಿಂದ ಕಾರ್ಯಕರ್ತ, ಅಲ್ಲಿಂದ ಮತದಾರರನ್ನು ಸಂಪರ್ಕಿಸುವ ಕಾರ್ಯ ಯೋಜನೆ ಅನುಷ್ಠಾನಕ್ಕೆ ತರಲಾಗುತ್ತಿದೆ’ ಎಂದು ಹೇಳಿದರು.