ಮಂಗಳೂರು: ‘ನೀವು ರಸ್ತೆ, ಚರಂಡಿ ಯಂತಹ ಸಣ್ಣ ವಿಚಾರದ ಬಗ್ಗೆ ಮಾತನಾಡಬೇಡಿ. ನಿಮ್ಮ ಮಕ್ಕಳ ಬದುಕಿನ ಭವಿಷ್ಯದ ಪ್ರಶ್ನೆ ‘ಲವ್ ಜಿಹಾದ್’ ನಿಲ್ಲಿಸಬೇಕಾದರೆ ಭಾರತೀಯ ಜನತಾ ಪಾರ್ಟಿಯೇ ಬೇಕು ಎಂದು ಜನರಿಗೆ ಮನವರಿಕೆ ಮಾಡಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷದ ಕಾರ್ಯಕರ್ತ ರನ್ನು ಉದ್ದೇಶಿಸಿ ಹೇಳಿರುವ ವಿಡಿಯೊ ಜಾಲತಾಣಗಳಲ್ಲಿ ಹರಿದಾಡುತ್ತಿದೆ.