ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಸಮಾಜವಾದಿ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಸಿದ್ದರಾಮಯ್ಯ ಜನರು ಸಂಕಷ್ಟದಲ್ಲಿರುವಾಗ ಮಜಾವಾದ ಪ್ರದರ್ಶಿಸಿದ್ದಾರೆ. ಜನರ ಸಂಕಷ್ಟಕ್ಕೆ ಸ್ಪಂದಿಸಿದ ಸರ್ಕಾರ, ತನ್ನ ಒಂದು ವರ್ಷದ ಸಂಭ್ರಮಾಚರಣೆಯ ಜನೋತ್ಸವ ರದ್ದುಮಾಡಿತು. ಆದರೆ, ಕಾಂಗ್ರೆಸ್ನ ಒಂದು ಗುಂಪು ಸಿದ್ದರಾಮಯ್ಯ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಲು ಈ ಕಾರ್ಯಕ್ರಮ ನಡೆಸಿದೆ. ಕಾಂಗ್ರೆಸ್ ಪಕ್ಷಕ್ಕೆ ಜನಪರ ಕಾಳಜಿ ಇಲ್ಲ ಎಂಬುದು ಇದರಿಂದ ಸಾಬೀತಾಗಿದೆ’ ಎಂದಿದ್ದಾರೆ.