‘ನಮ್ಮ ಪಕ್ಷದಲ್ಲಿ ಕೆಲವು ಅಭಿಪ್ರಾಯಭೇದಗಳಿವೆ. ಆದರೆ ಭಿನ್ನಾಭಿಪ್ರಾಯವಿಲ್ಲ. ವ್ಯತ್ಯಾಸಗಳನ್ನು ಸರಿಪಡಿಸುವ ವ್ಯವಸ್ಥೆ ನಮ್ಮಲ್ಲಿದೆ. ಆದರೆ, ಎಂಥ ತಪ್ಪುಗಳನ್ನೂ ಸರಿಪಡಿಸುವ ಪದ್ಧತಿ ಕಾಂಗ್ರೆಸ್ನಲ್ಲಿ ಇಲ್ಲ.ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಧ್ಯೆ ಉಂಟಾದ ಸಣ್ಣ ವ್ಯತ್ಯಾಸ ಎರಡು ದಿನಗಳಲ್ಲಿ ಬಗೆಹರಿಯಲಿದೆ. ಇದರಿಂದ ಉಪಚುನಾವಣೆಗಳ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ’ ಎಂದೂ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.