‘ರಾಜ್ಯದ ವಿವಿಧ ಭಾಗಗಳಲ್ಲಿರುವ ವಿಮಾನ ನಿಲ್ದಾಣಗಳಿಗೆ ಅಲ್ಲಿನ ಸಾಧಕರ ಹೆಸರುಗಳನ್ನು ಇಡಲು ಅನುಮೋದನೆ ನೀಡಬೇಕು. ಮಂಗಳೂರು ವಿಮಾನ ನಿಲ್ದಾಣಕ್ಕೆ ರಾಣಿ ಅಬ್ಬಕ್ಕ ದೇವಿ, ರಾಷ್ಟ್ರಕವಿ ಗೋವಿಂದ ಪೈ ಅಥವಾ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶಿವರಾಮ ಕಾರಂತರ ಹೆಸರನ್ನು ಇಡಬೇಕು. ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅಥವಾ ಸರ್.ಎಂ. ವಿಶ್ವೇಶ್ವರಯ್ಯ, ಹುಬ್ಬಳ್ಳಿ–ಧಾರವಾಡದ ವಿಮಾನ ನಿಲ್ದಾಣಕ್ಕೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ದ.ರಾ. ಬೇಂದ್ರೆ ಅಥವಾ ವಿ.ಕೃ. ಗೋಕಾಕ್ ಅವರ ಹೆಸರನ್ನು ಇಡಬೇಕು’ ಎಂದು ಒತ್ತಾಯಿಸಿದ್ದಾರೆ.