ಕೋಲಾರ: ‘ಗುತ್ತಿಗೆದಾರರ ಸಂಘದವರು ಕಾಂಗ್ರೆಸ್ ಬೆಂಬಲಿಗರಂತೆ ನಡೆದುಕೊಳ್ಳುತ್ತಿದ್ದಾರೆ. ಅವರ ಕಚೇರಿಯ ಮೇಲಿರುವ ನಾಮಫಲಕವನ್ನು ಕಾಂಗ್ರೆಸ್ ಕಚೇರಿ ಎಂದು ಬದಲಾಯಿಸಿಕೊಳ್ಳಲಿ. ಅವರು ಯಾವತ್ತಾದರೂ ಗುತ್ತಿಗೆದಾರರ ಸಮಸ್ಯೆ ಆಲಿಸಿದ್ದಾರೆಯೇ? ಗುತ್ತಿಗೆದಾರರಿಗೆ ಒಳ್ಳೆಯದು ಮಾಡಿದ್ದಾರೆಯೇ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಪ್ರಶ್ನಿಸಿದರು.
ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಗುತ್ತಿಗೆದಾರರ ಸಂಘದ ಅಧ್ಯಕ್ಷರು ಎಷ್ಟು ಕಾಮಗಾರಿ ಮಾಡಿದ್ದಾರೆ, ಎಲ್ಲೆಲ್ಲಿ ಕಾಮಗಾರಿ ಮಾಡಿದ್ದಾರೆ ಎಂಬ ಪಟ್ಟಿ ನೀಡಲಿ’ ಎಂದು ಆಗ್ರಹಿಸಿದರು.